Home / new delhi / ಚಿರತೆ ಬಂದೈತಿ, ಓಡಲೇ….ಓಡಲೇ… ಓಡಲೇ…!

ಚಿರತೆ ಬಂದೈತಿ, ಓಡಲೇ….ಓಡಲೇ… ಓಡಲೇ…!

Spread the love

ಬೆಳಗಾವಿ-ಬೆಳಗಾವಿ ಮಹಾನಗರದಲ್ಲಿ ಚಿರತೆ ಪತ್ತೆ ಕಾರ್ಯಾಚರಣೆ ಜೋರಾಗಿ ನಡೆಯುತ್ತಿದೆ.ಇಂದು ಮಧ್ಯಾಹ್ನ 3-00 ಗಂಟೆ ಸುಮಾರಿಗೆ ಹಿಂಡಲಗಾ ಗಣಪತಿ ಮಂದಿರದ ಬಳಿ ಇರುವ ಮಿಲಿಟರಿ ಕ್ವಾಟರ್ಸ್ ಹತ್ತಿರ ಚಿರತೆ ಕಾಣಿಸಿಕೊಂಡಿದೆ.

 

ಹಿಂಡಲಗಾ ಗಣಪತಿ ಮಂದಿರದ ಹತ್ತಿರದಲ್ಲೇ ಇರುವ ಹನುಮಾನ ನಗರದ ಡಬಲ್ ರಸ್ತೆಯಲ್ಲಿರುವ ಮಿಲಿಟರಿ ಕ್ವಾಟರ್ಸ್ ಗೇಟ್ ಬಳಿ ಚಿರತೆ ಕಾಣಿಸಿಕೊಂಡು ಮತ್ತೆ ಗಾಲ್ಫ್ ಮೈದಾನದಲ್ಲಿ ಪರಾರಿಯಾಗಿದೆ.

 

ಗಾಲ್ಫ್ ಮೈದಾನದಲ್ಲಿ ಚಿರತೆ ಪತ್ತೆಗೆ ಜಿಸಿಬಿಯಿಂದ ಕಾರ್ಯಾಚರಣೆ ನಡೆಯುತ್ತಿರುವಾಗ,ಗಿಡಗಂಟೆಯಲ್ಲಿ ಅಡಗಿ ಕುಳಿತಿದ್ದ ಚಿರತೆ ಜಂಪ್ ಮಾಡಿ,ಮಿಲಿಟರಿ ಕ್ವಾಟರ್ಸ ಹತ್ತಿರ ಬಂದಿದೆ,ಅರಣ್ಯ ಇಲಾಖೆಯ ಕಾರ್ಯಾಚರಣೆಯ ಪಡೆ ಚಿರತೆ ಬೆನ್ನಟ್ಟಿ ಚಿರತೆಗೆ ಬಲೆ ಹಾಕುವ ಪ್ರಯತ್ನ ಕೊನೆಗೂ ವಿಫಲವಾಗಿದೆ.

 

ಕಾರ್ಯಪಡೆ ಈಗ ಚಿರತೆಯ ಬೆನ್ನಟ್ಟಿ ಗಾಲ್ಫ್ ಅರಣ್ಯಕ್ಕೆ ನುಗ್ಗಿದ್ದು ಸಂಜೆಯೊಳಗಾಗಿ ಈ ಖತರ್ನಾಕ್ ಚಿರತೆ ಬಲೆಗೆ ಬೀಳುವ ಲಕ್ಷಣಗಳು ಕಂಡು ಬಂದಿವೆ.ಗಾಲ್ಫ್ ಮೈದಾನದಲ್ಲಿ ಈಗ ಚಿರತೆ ಬಂದೈತಿ ಓಡಲೇ..ಎನ್ನುತ್ತ ಕಾರ್ಯಪಡೆ ಚಿರತೆ ಬೆನ್ನಟ್ಟಿ ಓಡಾಡುತ್ತಿದೆ..


Spread the love

About Laxminews 24x7

Check Also

ಕುಸ್ತಿ ಗ್ರಾಮೀಣ ಭಾಗದ ಬಹುದೊಡ್ಡ ಕ್ರೀಡೆ

Spread the love ರಬಕವಿ-ಬನಹಟ್ಟಿ: ಕುಸ್ತಿ ಗ್ರಾಮೀಣ ಭಾಗದ ಬಹುದೊಡ್ಡ ಕ್ರೀಡೆ. ಗ್ರಾಮೀಣ ಭಾಗದ ಜನರು ಕುಸ್ತಿಗೆ ಬಹಳಷ್ಟು ಮಹತ್ವ ನೀಡುತ್ತಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ