Breaking News

ಕೃಷ್ಣಾ ನದಿಯಲ್ಲಿ ಮುಳುಗಿ ಯುವಕ ಸಾವು

Spread the love

ಸುರಪುರ: ತಾಲೂಕಿನ ವಾಗಣಗೇರಾ ಗ್ರಾಮದ ಹನುಮಾನ ದೇವರ ಕಾರ್ತಿಕೋತ್ಸವದ ಅಂಗವಾಗಿ ದೇವರ ಪಲ್ಲಕ್ಕಿಯನ್ನು ತೆಗೆದುಕೊಂಡು ಗಂಗಾ ಸ್ನಾನಕ್ಕೆಂದು ನದಿಗೆ ಹೋದಾಗ, ನದಿಯಲ್ಲಿ ಈಜಲು ಹೋದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಹಾಂತೇಶ ಕವಡಿಮಟ್ಟಿ(19) ಮೃತ ಯುವಕ.

ಸೆಳ್ಳಗಿ ಗ್ರಾಮದ ಬಳಿಯಲ್ಲಿನ ಕೃಷ್ಣಾ ನದಿಗೆ ಹನುಮಾನ ದೇವರ ಪಲ್ಲಕ್ಕಿಯನ್ನು ತೆಗೆದುಕೊಂಡು ಹೋಗಲಾಗಿತ್ತು. ಈ ವೇಳೆ ಗಂಗಾ ಸ್ನಾನಕ್ಕೆಂದು ತೆರಳಿದ ವೇಳೆ ನೀರಿನ ಸುಳಿವಿಗೆ ಸಿಲುಕಿ ಈ ದುರ್ಘಟನೆ ನಡೆದಿದೆ.

ಯುವಕನ ಸಾವಿನ ಸುದ್ದಿ ತಿಳಿದುಗ್ರಾಮದ ಜನರು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಾಗಿದೆ.


Spread the love

About Laxminews 24x7

Check Also

ಅನಾರೋಗ್ಯದಿಂದ ತಾಯಮ್ಮ ಹುಲಿ ಸಾವು

Spread the loveಮೈಸೂರು: ಚಾಮರಾಜೇಂದ್ರ ಮೃಗಾಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಹೆಣ್ಣು ಹುಲಿ ತಾಯಮ್ಮ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮುಂಜಾನೆ 3.45ರ ಸಮಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ