Breaking News

ಬೆಳಗಾವಿ ಉತ್ತರ ವಲಯ ಐಜಿಪಿಯಾಗಿ ಸಂದೀಪ್ ಪಾಟೀಲ್ ನೇಮಕ; ರಾಜ್ಯದ ಹಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ

Spread the love

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಹಲವು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಉತ್ತರ ವಲಯದ ಐಜಿಪಿಯಾಗಿದ್ದ ಡಾ. ಚೇತನ್ ಸಿಂಗ್ ರಾಥೋರ್ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಹಿರಿಯ ಅಧಿಕಾರಿ ಸಂದೀಪ್ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಸರ್ಕಾರವು ಬುಧವಾರದಂದು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಅದರಂತೆ 2004ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರು ಬೆಳಗಾವಿ ಉತ್ತರ ವಲಯದ ನೂತನ ಪೊಲೀಸ್ ಮಹಾನಿರೀಕ್ಷಕರಾಗಿ (ಐಜಿಪಿ) ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪ್ರಸ್ತುತ ಈ ಹುದ್ದೆಯಲ್ಲಿದ್ದ ಡಾ. ಚೇತನ್ ಸಿಂಗ್ ರಾಥೋರ್ ಅವರನ್ನು ಸಿಐಡಿ ಆರ್ಥಿಕ ಅಪರಾಧ ವಿಭಾಗದ ಐಜಿಪಿಯಾಗಿ ವರ್ಗಾಯಿಸಲಾಗಿದೆ. ಇದರೊಂದಿಗೆ ನೇಮಕಾತಿಯ ನಿರೀಕ್ಷೆಯಲ್ಲಿದ್ದ ಅನುಪಮ್ ಅಗ್ರವಾಲ್ ಅವರಿಗೆ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್‌ಆರ್‌ಪಿ) ಐಜಿಪಿಯಾಗಿ ಜವಾಬ್ದಾರಿ ನೀಡಲಾಗಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ತಕ್ಷಣದ ವರ್ಗಾವಣೆಗಳು ಜಾರಿಗೆ ಬರಲಿವೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಸಂಜಯ್ ಬಿ. ಎಸ್. ಆದೇಶದಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ GTTC ಡಿಪ್ಲೋಮಾ ಪ್ರವೇಶಕ್ಕೆ ಮೇ 10 ಕೊನೆಯ ದಿನ

Spread the loveತಾಂತ್ರಿಕ ಶಿಕ್ಷಣದ ಸುವರ್ಣ ಅವಕಾಶ ಬಳಸಿಕೊಳ್ಳಲು ಪ್ರಾಚಾರ್ಯ ಯಲ್ಲಪ್ಪ ಸವದತ್ತಿ ಕರೆ ಜಿಟಿಟಿಸಿ ಡಿಪ್ಲೋಮಾ ಪ್ರವೇಶಕ್ಕೆ ಮುಹೂರ್ತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ