Breaking News

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸಂತೋಷ್‌ ಲಾಡ್‌ ಕಣ್ಣೀರು

Spread the love

ಬೆಂಗಳೂರು: ಸಿಎಂ ಸಿದ್ದರಾಮಯ್ಯ  ರಾಜೀನಾಮೆಗೆ ಸಚಿವ ಸಂತೋಷ್‌ ಲಾಡ್‌ ಕಣ್ಣೀರಿಟ್ಟಿದ್ದಾರೆ.

ರಾಜೀನಾಮೆಗೂ ಮುನ್ನ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಇಂದು ಬ್ರೇಕ್‌ಫಾಸ್ಟ್‌ ಸಭೆ ನಡೆಸಿದರು. ಈ ವೇಳೆ ತಮ್ಮ ರಾಜೀನಾಮೆಯನ್ನು ಸಹ ಘೋಷಣೆ ಮಾಡಿದರು. ಮುಂದಿನ ಸಿಎಂ ಡಿ.ಕೆ.ಶಿವಕುಮಾರ್‌ ಎಂದು ಘೋಷಿಸಿ, ಅವರಿಗೆ ಸಹಕಾರ ನೀಡುವಂತೆ ಸಚಿವರಲ್ಲಿ ಸಿದ್ದರಾಮಯ್ಯ ಮನವಿ ಮಾಡಿಕೊಂಡರು.

ಸಿದ್ದರಾಮಯ್ಯ ರಾಜೀನಾಮೆ ಘೋಷಣೆ ಕೇಳಿ ಸಭೆಯಲ್ಲೇ ಆಪ್ತ ಸಚಿವರು ಕಣ್ಣೀರಿಟ್ಟರು. ಸಭೆ ಬಳಿಕ ಒಬ್ಬೊಬ್ಬರಾಗಿ ಹೊರಬಂದ ಸಚಿವರ ಮುಖದಲ್ಲಿ ಬೇಸರದ ಭಾವ ಕಂಡುಬಂದಿತು. ಸಿಎಂ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ರಾಜೀನಾಮೆ ಕುರಿತು ಸಚಿವ ಸಂತೋಷ್‌ ಲಾಡ್‌ ಬಳಿ ಮಾಧ್ಯಮದವರು ಪ್ರಶ್ನೆ ಕೇಳಿದರು. ಈ ವೇಳೆ, ಗದ್ಗದಿತರಾದ ಸಂತೋಷ್‌ ಲಾಡ್‌ ದುಃಖ ತಡೆಯಲಾಗದೇ ಕಣ್ಣೀರಿಟ್ಟರು. ಯಾವುದೇ ಪ್ರತಿಕ್ರಿಯೆ ನೀಡದೇ ಕಾರಲ್ಲಿ ಹೊರಟುಹೋದರು.


Spread the love

About Laxminews 24x7

Check Also

ಶಿವಾಜಿನಗರದಲ್ಲಿ GBA ಅಧಿಕಾರಿಗಳ ಮೇಲೆ ಹಲ್ಲೆ; ಬೆಳಗ್ಗೆಯೇ ದಾಳಿ ಪ್ಲಾನ್, 11 ಮಂದಿ ಅರೆಸ್ಟ್

Spread the loveಬೆಂಗಳೂರು: ಶಿವಾಜಿನಗರದಲ್ಲಿ  ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ GBA ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ