ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವಿನ ಕುರ್ಚಿ ಕಾಳಗದ ನಡುವೆ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಅವರಿಗೆ ಬುಲಾವ್ ನೀಡಿದ್ದಾರೆ.
ನಿನ್ನೆ ಸಂಜೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣಿಸಲಿದ್ದು, ನಾಳೆ ಬೆಳಿಗ್ಗೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ನಾಳೆ ಕಾಂಗ್ರೆಸ್ ನಲ್ಲಿನ ಅಧಿಕಾರ ಹಂಚಿಕೆ ಗೊಂದಲ, ನಾಯಕರ ಹೇಳಿಕೆಗಳಿಗೆ ತೆರೆ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬೆಳವಣಿಗೆ ನಡುವೆ ಸಚಿವ ಸತೀಶ್ ಜಾರಕಿಹೊಳಿ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಇಂದು ಬೆಳಿಗ್ಗೆ 11 ಗಂಟೆಗೆ ಮುಹೂರ್ತ ಫಿಕ್ಸ್ ಆಗಿದೆ. ಎಲ್ಲಾ ಗೊಂದಲಗಳಿಗೆ ತೆರೆ ಬೀಳಲಿದೆ. ಮುಹೂರ್ತ ಅಷ್ಟೇ ಫಿಕ್ಸ್ ಆಗಿದೆ. ಆದರೆ ಅವರ ಅಜೆಂಡಾ ಏನು ಎಂಬುದು ಗೊತ್ತಿಲ್ಲ. ಅಲ್ಲಿ ಏನು ಚರ್ಚೆ ಆಗುತ್ತದೆ ಎಂಬುದರ ಬಗ್ಗೆಯೂ ಮಾಹಿತಿ ಇಲ್ಲ. ನಾಳೆ ಏನಾಗಲಿದೆ ಎಂಬುದನ್ನು ಕಾದುನೋಡಬೇಕು ಎಂದು ಹೇಳಿದರು.
ನಾವು ಕಾಂಗ್ರೆಸ್ ನಲ್ಲಿನ ಗೊಂದಲಗಳಿಗೆ ತೆರೆ ಎಳೆಯುವಂತೆ ಹೇಳುತ್ತಿದ್ದೆವು. ಹಾಗಾಗಿ ನಾಳೆ ಬೆಳಿಗ್ಗೆ ಹೈಕಮಾಂಡ್ ನಾಯಕರು ಮುಹೂರ್ತ್ ಫಿಕ್ಸ್ ಮಾಡಿದ್ದಾರೆ. ಚರ್ಚೆ ಮಾಡಲಿದ್ದಾರೆ. ನಾಳೆ ಎಲ್ಲಾ ಗೊಂದಗಳಿಗೆ, ನಾಯಕರ ಅನಾವಶ್ಯಕ ಹೇಳಿಕೆಗಳಿಗೆ ಬ್ರೇಕ್ ಬೀಳಲಿದೆ ಎಂಬ ನಿರೀಕ್ಷೆ ಇದೆ ಎಂದರು.
Laxmi News 24×7