Breaking News

ಘಟಪ್ರಭಾ ಕೆನಾಲ್‌ಗೆ ಸೇತುವೆ ನೆಲಸಮ ಸತೀಶ ಜಾತಕಿಹೋಳಿ ಪರಿಶೀಲನೆ

Spread the love

 

ಸಂಕೇಶ್ವರ–ಯರಗಟ್ಟಿ ರಾಜ್ಯ ಹೆದ್ದಾರಿಯ ಘಟಪ್ರಭಾ ಪಟ್ಟಣದ ಸಮೀಪ, ಘಟಪ್ರಭಾ ಕೆನಾಲ್‌ಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಹಳೆಯ ಸೇತುವೆ ಗಂಭೀರ ಬಿರುಕು ಬಿಟ್ಟು ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಗೆ ತಲುಪಿರುವುದರಿಂದ ಅದನ್ನು ನೆಲಸಮ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಚಿವ ಸತೀಶ ಜಾರಕಿಹೋಳಿ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸಿದರು.

ಸಾರ್ವಜನಿಕರ ಸುರಕ್ಷತೆಯನ್ನು ಪ್ರಥಮ ಆದ್ಯತೆಯಾಗಿ ಪರಿಗಣಿಸಿ, ಅಂದಾಜು ರೂ. 5.00 ಕೋಟಿ ವೆಚ್ಚದಲ್ಲಿ ನೂತನ ಸೇತುವೆ ನಿರ್ಮಾಣ ಕಾರ್ಯವನ್ನು 45 ದಿನಗಳೊಳಗೆ ಪೂರ್ಣಗೊಳಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಯಿತು.

ಇದೇ ವೇಳೆ, ದಿನನಿತ್ಯದ ವಾಹನ ಸಂಚಾರಕ್ಕೆ ಯಾವುದೇ ಅಡೆತಡೆ ಉಂಟಾಗದಂತೆ ತಾತ್ಕಾಲಿಕ ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಅದನ್ನೂ ಒಂದು ವಾರದೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.


Spread the love

About Laxminews 24x7

Check Also

ಅಂಕಲಗಿ ಘಟಕ ಹೋಮ್‌ಗಾರ್ಡಗೆ ಮುಖ್ಯಮಂತ್ರಿಗಳ ಸೇವಾ ಪದಕ ಶಾಸಕರಿಂದ ಸತ್ಕಾರ

Spread the loveಗೋಕಾಕ: ತಾಲೂಕಿನ ಅಂಕಲಗಿ ಘಟಕ ಹೋಮ್‌ಗಾರ್ಡ ಆಗಿರುವ ಹೊಳೆಪ್ಪಾ ಬಸವಣ್ಣಿ ನೇಸರಗಿ ಅವರಿಗೆ ೨೦೨೫ರ ಮುಖ್ಯಮಂತ್ರಿಗಳ ಸೇವಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ