Breaking News

ಇಲ್ಲಿನ ಎಲ್ಲ ವಿದ್ಯಾರ್ಥಿಗಳು 20 ಕಿ.ಮೀ. ದೂರ ಪ್ರಯಾಣ ಮಾಡಿದರಷ್ಟೇ ಶಾಲಾ ಕಾಲೇಜು ಗಳಿಗೆ ತಲುಪಲು ಸಾಧ್ಯ.

Spread the love

 

 

ಗೋಕಾಕ: ಸಾರಿಗೆ ಸಂಸ್ಥೆ ಬಸ್‌ ಸಕಾಲಕ್ಕೆ ಆಗಮಿಸದೇ ಇರುವುದರಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗೆ ಸಮಯಕ್ಕೆ ಸರಿಯಾಗಿ ತಲುಪಲಾಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಕೋವಿಡ್‌ ಮಾರ್ಗಸೂಚಿ ತೆರವಾದ ನಂತರ ಗ್ರಾಮೀಣ ಪ್ರದೇಶದಲ್ಲಿ ಬಸ್‌ಗಳ ಸೇವೆ ಅಪರೂಪವಾಗಿದೆ. ಮುಖ್ಯ ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದ ಎಲ್ಲ ಕಡೆಯಲ್ಲೂ ಪೂರ್ಣ ಪ್ರಮಾಣದಲ್ಲಿ ಬಸ್‌ ಸೇವೆ ಆರಂಭಗೊಂಡಿಲ್ಲ.

 

ಇದರಿಂದ ವಿದ್ಯಾರ್ಥಿಗಳು ಬಸ್‌ಗಳಿಗಾಗಿ ರಸ್ತೆ ಬದಿಯಲ್ಲಿ ಕಾದು ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ.

ಗೋಕಾಕ ತಾಲೂಕಿನ ಸಾವಳಗಿ. ಶಿವಾಪೂರ.ಕೊಣ್ಣೂರ. ಮರಡಿಮಠ.ಪಾಲ್ಸ

ಸೇರಿದಂತೆ ಎಲ್ಲ ಹಳ್ಳಿಯ ಶಾಲಾ ವಿದ್ಯಾರ್ಥಿಗಳು ಹಾಗೂ ಪದವಿ ಕಾಲೇಜ ವಿದ್ಯಾರ್ಥಿಗಳು ತಾಲೂಕಾ ಕೇಂದ್ರಕ್ಕೆ ಬರಬೇಕು.

 

 

ಇಲ್ಲಿನ ಎಲ್ಲ ವಿದ್ಯಾರ್ಥಿಗಳು 20 ಕಿ.ಮೀ. ದೂರ ಪ್ರಯಾಣ ಮಾಡಿದರಷ್ಟೇ ಶಾಲಾ ಕಾಲೇಜು ಗಳಿಗೆ ತಲುಪಲು ಸಾಧ್ಯ. ಆದರೆ, ಸಮಯಕ್ಕೆ ಸರಿಯಾಗಿ ಬಸ್‌ ಸೌಲಭ್ಯ ಇಲ್ಲವೆಂದು ವಿದ್ಯಾರ್ಥಿಗಳಪೋಷಕರು ದೂರಿದ್ದಾರೆ..

 

 


Spread the love

About Laxminews 24x7

Check Also

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the loveಪ್ರತಿಯೊಬ್ಬರೂ ಜೀವನವನ್ನು ಕ್ರೀಡಾಸ್ಪೂರ್ತಿಯಿಂದ ತೆಗೆದುಕೊಂಡು, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ನಮ್ಮ ಜೀವನದ ನಿಜವಾದ ಗುರು ಎಂದರೆ ನಾವೇ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ