Breaking News

ಲಾಲ್‌ಬಾಗ್ ಉಳಿಸಿ – ಬಂಡೆ ತಬ್ಬಿಕೊಂಡು ವಾಕರ್ಸ್ ಪ್ರತಿಭಟನೆ

Spread the love

ಬೆಂಗಳೂರು: ಸುರಂಗ ರಸ್ತೆ ಯೋಜನೆ ವಿರುದ್ಧ ವಾಕರ್ಸ್ ಅಸೋಷಿಯೇಷನ್‌ ವಿಭಿನ್ನವಾಗಿ ಪ್ರತಿಭಟನೆ  ನಡೆಸಿದೆ. ಲಾಲ್‌ಬಾಗ್‌ನಲ್ಲಿರುವ ಬಂಡೆಯನ್ನು ತಬ್ಬಿಕೊಂಡು ಲಾಲ್‌ಬಾಗ್‌  ಉಳಿಸಿ ಎಂದು ವಾಕಾರ್ಸ್ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ʻಬಂಡೆಯನ್ನು ತಬ್ಬಿಕೊಳ್ಳಿʼ ಹೆಸರಿನಲ್ಲಿ ಪ್ರತಿಭಟನೆ ನಡೆದಿದೆ. ಸುರಂಗ ರಸ್ತೆ ಯೋಜನೆಯಿಂದ ಲಾಲ್‌ಬಾಗ್‌ಗೆ ಸಮಸ್ಯೆಯಾಗಲಿದೆ. ಯಾವುದೇ ಕಾರಣಕ್ಕೂ ಲಾಲ್‌ಬಾಗ್‌ಗೆ ಧಕ್ಕೆ ಆಗಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಅನುಮತಿ ಇಲ್ಲದೇ ಪ್ರತಿಭಟನೆ ಮಾಡೋ ಹಾಗಿಲ್ಲ ಎಂದು ಪೊಲೀಸರು ಪ್ರತಿಭಟನಾಕಾರರಿಗೆ ಮಾಹಿತಿ ನೀಡಿ ಕಳುಹಿಸಿದ್ದಾರೆ. ಮುಂದಿನ ದಿನಗಳಲ್ಲಿ ಫ್ರೀಡಂಪಾರ್ಕ್ ಪ್ರತಿಭಟನೆ ಮಾಡೋದಾಗಿ ಹೇಳಿ ಪ್ರತಿಭಟನಾಕಾರರು ಅಲ್ಲಿಂದ ತೆರಳಿದ್ದಾರೆ.

ಈ ಹಿಂದೆ ಮಾನವ ಸರಪಳಿ ಮಾಡಿ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಈಗ ಮತ್ತೊಮ್ಮೆ ಲಾಲ್ ಬಾಗ್ ಉಳಿಸಬೇಕು ಅಂತ ಸರ್ಕಾರಕ್ಕೆ ವಾಕರ್ಸ್ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಹೆಂಡತಿಯ ಹತ್ಯೆಗೈದ BSF ಯೋಧ – ಮಹಡಿಯಿಂದ ಬಿದ್ದು ಸಾವು ಎಂದು ಬಿಂಬಿಸಲು ಯತ್ನ

Spread the loveಚಂಡೀಗಢ: ರಜೆ ಮೇಲೆ ಮನೆಗೆ ಬಂದಿದ್ದ ಗಡಿ ಭದ್ರತಾ ಪಡೆ ಯೋಧನೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ