ಶಿವಮೊಗ್ಗ : ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ನಿರ್ಬಂಧ ಹೇರಲು ಚಿಂತನೆ ನಡೆಸಿರುವ ರಾಜ್ಯ ಸರ್ಕಾರದ ನಿಲುವನ್ನು ವಿರೋಧಿಸಿರುವ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಒಂದು ವೇಳೆ ಕಡಿವಾಣ ಹಾಕಲು ಮುಂದಾದಲ್ಲಿ ಗಣಪತಿಯ ಶಾಪ ತಟ್ಟಿಯಡಿಯೂರಪ್ಪ ನೇತೃತ್ವದ ಸರ್ಕಾರ ಸರ್ವನಾಶ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನಂತೂ ಗಣಪತಿ ಹಬ್ಬ ಅದ್ದೂರಿಯಾಗಿ ಆಚರಣೆ ಮಾಡಿಯೇ ಮಾಡುತ್ತೇನೆ. ಯಾರು ಬಂದು ತಡೆಯುತ್ತಾರೋ ನೋಡೋಣ ಎಂದು ತಿಳಿಸಿದರು.
ಕಾಂಗ್ರೆಸ್ನಲ್ಲಿಯೇ ಅಖಂಡಗೇ ಖೆಡ್ಡಾ, ಪುಲಿಕೇಶಿನಗರ ಪಾರಮ್ಯಕ್ಕೆ ಇಳಿದಿದ್ದ ಡಿಕೆಶಿ ಶಿಷ್ಯ!? .
ಹಿಂದೂಗಳಿಗೆ ಗಣೇಶ ಹಬ್ಬ ಪವಿತ್ರವಾದ್ದು. ಅದನ್ನು ಹೀಗೆ ಮಾಡಿ, ಹಾಗೇ ಮಾಡಿ ಎನ್ನುವುದಕ್ಕೆ ಯಾರಿಗೂ ಅಧಿಕಾರ ಇಲ್ಲ ಎಂದರು.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??