ಕ್ಯಾಬಿನೆಟ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಟಿ20 ವಿಶ್ವಕಪ್ಗೆ ಸಂಬಂಧಿಸಿದಂತೆ ನಾವು ಭಾರತದ ವಿರುದ್ಧ ಪಂದ್ಯ ಆಡುವುದಿಲ್ಲ ಎಂಬ ಸ್ಪಷ್ಟ ನಿಲುವನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.
ಕ್ರೀಡೆಯಲ್ಲಿ ಯಾವುದೇ ರಾಜಕೀಯ ಇರಬಾರದು; ಇದು ನಮ್ಮ ಸ್ಪಷ್ಟ ನಿಲುವು. ಎಚ್ಚರಿಕೆಯಿಂದ ಚರ್ಚಿಸಿದ ನಂತರ ನಾವು ಈ ನಿಲುವನ್ನು ತೆಗೆದುಕೊಂಡಿದ್ದೇವೆ. ನಾವು ಬಾಂಗ್ಲಾದೇಶದೊಂದಿಗೆ ಇದ್ದೇವೆ ಮತ್ತು ಇದು ಸರಿಯಾದ ನಿರ್ಧಾರ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು. ಭದ್ರತಾ ಕಾಣ ನೀಡಿ ಬಾಂಗ್ಲಾದೇಶ ಭಾರತಕ್ಕೆ ಬರುವುದಿಲ್ಲ. ಶ್ರೀಲಂಕಾದಲ್ಲಿ ಟೂರ್ನಿ ಆಡಿಸುವಂತೆ ಬೇಡಿಕೆ ಇಟ್ಟಿತ್ತು. ಬಾಂಗ್ಲಾದ ಈ ನಿಲುವಿಗೆ ಪಾಕ್ ಬೆಂಬಲ ವ್ಯಕ್ತಪಡಿಸಿತ್ತು. ಆದರೆ ಐಸಿಸಿ ಬಾಂಗ್ಲಾದ ಬೇಡಿಕೆಯನ್ನು ತಿರಸ್ಕರಿಸಿತ್ತು.
Laxmi News 24×7