Breaking News

ಅಲಿ ಖಮೇನಿ ಪೋಸ್ಟರ್ ವಿರುದ್ಧ ಶ್ರೀರಾಮ ಸೇನೆಯಿಂದ ಶಿವಾಜಿ ಹಾಗೂ ಮೋದಿ ಬ್ಯಾನರ್ ಅಭಿಯಾನ

Spread the love

ಬೆಳಗಾವಿ : ನಗರದಲ್ಲಿ ಅಳವಡಿಸಿರುವ ಇರಾನ್ ದೇಶದ ಅಲಿ ಖಮೇನಿ ಪೋಸ್ಟರ್ ವಿರುದ್ಧ ಶ್ರೀರಾಮ ಸೇನೆಯಿಂದ ಆಫ್ಜಲ್‌ಖಾನ್‌ನ ವಧೆ ಮಾಡುತ್ತಿರುವ ಛತ್ರಪತಿ ಶಿವಾಜಿ ಹಾಗೂ ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು, ಭಾರತದ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರವಿರುವ ಬ್ಯಾನರ್‌ಗಳನ್ನು ಸೋಮವಾರ ಅಳವಡಿಸಿದೆ.
ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ನೇತೃತ್ವದಲ್ಲಿ ಕಾರ್ಯಕರ್ತರು ನಗರದ ಅಶೋಕ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಈ ಬ್ಯಾನರ್‌ಗಳನ್ನು ಅಳವಡಿಸಿದರು. ಇದರಲ್ಲಿ ಯುಗಾದಿಯ ಶುಭಾಶಯವನ್ನೂ ಕೋರಲಾಗಿದೆ. ಇದೇ ರೀತಿ ನಗರದ ವಿವಿಧೆಡೆಯೂ ಕಾರ್ಯಕರ್ತರು ಬ್ಯಾನರ್ ಅಳವಡಿಸಲು ಮುಂದಾಗಿದ್ದಾರೆ.
ನಗರದ ವಿವಿಧೆಡೆಗಳಲ್ಲಿ ಖಮೇನಿಯ ಆಳೆತ್ತರದ ಕಟೌಟ್‌ಗಳನ್ನು ಅಳವಡಿಸಲಾಗಿದ್ದು, ಇದು ದೇಶಹದ್ರೋಹದ ಕೃತ್ಯ. ಈ ಕೂಡಲೇ ತೆರವುಗೊಳಿಸಬೇಕು ಎಂದು ಶ್ರೀರಾಮಸೇನೆ ಪೊಲೀಸ್ ಇಲಾಖೆಯನ್ನು ಆಗ್ರಹಿಸಿತ್ತು. ಆದರೆ ತೆರವು ಮಾಡಿಸದೇ ಇರುವುದರಿಂದ ಅದಕ್ಕೆ ಪ್ರತಿಯಾಗಿ ಈಗ ಸೇನೆಯೂ ಬ್ಯಾನರ್ ಅಭಿಯಾನ ಆರಂಭಿಸಿದ್ದೇವೆ ಎಂದು ಮುತಾಲಿಕ್ ತಿಳಿಸಿದ್ದಾರೆ.

Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ