ಬೆಂಗಳೂರು: ಕಲಬುರ್ಗಿಯಲ್ಲಿ ನಿಧನರಾದ ಶ್ರೀ ಮಹಮದ್ ಹುಸೇನ್ ಸಿದ್ದಿಕಿ, ಕೊರೊನಾ ಶಂಕಿತರೇ ಹೊರತು, ಅವರಿಗೆ ಆ ಸೋಂಕು ತಗುಲಿರುವುದು ದೃಢಪಟ್ಟಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರೋ ಅವರು, ನಾಗರಿಕರ ಹಿತದೃಷ್ಟಿಯಿಂದ, ಮೃತರ ಅಂತ್ಯಸಂಸ್ಕಾರಕ್ಕಾಗಿ ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾ ಆರೋಗ್ಯ ಇಲಾಖೆಯು ಕೈಗೊಂಡಿದೆ. ಇದರಲ್ಲಿ ಯಾವುದೇ ಅನಗತ್ಯ ಗೊಂದಲ, ಭಯ ಸೃಷ್ಟಿಸುವುದು ಬೇಡ ಎಂದು ಕೂಡ ಮನವಿ ಮಾಡಿಕೊಂಡಿದ್ದಾರೆ.
Laxmi News 24×7