Home / ಜಿಲ್ಲೆ / ಇಂದಿನಿಂದ ಏಷ್ಯಾದ ಅತಿ ದೊಡ್ಡ ರೇಷ್ಮೆ ಮಾರುಕಟ್ಟೆ ಓಪನ್

ಇಂದಿನಿಂದ ಏಷ್ಯಾದ ಅತಿ ದೊಡ್ಡ ರೇಷ್ಮೆ ಮಾರುಕಟ್ಟೆ ಓಪನ್

Spread the love

ಕೊರೊನಾ ಭೀತಿ ನಡುವೆ ವಹಿವಾಟು

ರಾಮನಗರ: ಕೊರೊನಾ ಪ್ರಕರಣಗಳು ಪತ್ತೆಯಾಗದೆ ನೆಮ್ಮದಿಯಾಗಿದ್ದ ರೇಷ್ಮೆನಗರಿಗೆ ಮುಂದಿನ ದಿನಗಳಲ್ಲಿ ರೇಷ್ಮೆ ಮಾರುಕಟ್ಟೆಯೇ ಕಂಟಕವಾಗಲಿದೆಯೇ ಎಂಬ ಆತಂಕ ಜಿಲ್ಲಾಡಳಿತಕ್ಕೆ ಇದೀಗ ಎದುರಾಗಿದೆ. ಸರ್ಕಾರದ ಆದೇಶದಂತೆ ಇಂದಿನಿಂದ ಏಷ್ಯಾದ ಅತಿ ದೊಡ್ಡ ರೇಷ್ಮೆ ಮಾರುಕಟ್ಟೆಯನ್ನು ತೆರೆಯಲಾಗುತ್ತಿದೆ.

ಸಾವಿರಾರು ಜನರು ಒಟ್ಟಿಗೆ ಸೇರುವ ಮಾರುಕಟ್ಟೆಯಲ್ಲಿ ಸಮಾಜಿಕ ಅಂತರ ಕಾಯ್ದುಕೊಳ್ಳುವುದು ಹೇಗೆ ಎಂಬ ಚಿಂತೆ ಜಿಲ್ಲಾಡಳಿತಕ್ಕೆ ಕಾಡುತ್ತಿದೆ. ಇತ್ತ ಮಾರುಕಟ್ಟೆ ಸ್ಥಗಿತಗೊಂಡಿದ್ದರಿಂದ ರೈತರು ಸಂಕಷ್ಟಕ್ಕೊಳಗಾಗಿದ್ದರು. ಇದೀಗ ನಿಟ್ಟುಸಿರು ಬಿಟ್ಟಿದ್ದಾರೆ.

ಏಷ್ಯಾದಲ್ಲೇ ಅತೀ ಹೆಚ್ಚು ವಹಿವಾಟು ನಡೆಸುವ ರಾಮನಗರದ ರೇಷ್ಮೆ ಮಾರುಕಟ್ಟೆಯ ಒಂದು ದಿನದ ಆದಾಯ ಸರಾಸರಿ 2 ಕೋಟಿ ರೂ.ಗಳಷ್ಟಿದೆ. ಆದರೆ ಇಲ್ಲಿ ರೈತರು, ಮಾರುಕಟ್ಟೆ ಅಧಿಕಾರಿಗಳು, ಡೀಲರ್ಸ್ ಸೇರಿ ಕನಿಷ್ಟ ಮೂರು ಸಾವಿರ ಮಂದಿ ಏಕಕಾಲದಲ್ಲಿ ಜಮಾವಣೆ ಆಗುತ್ತಾರೆ. ಗೂಡಿನಂತಿರುವ ಈ ಮಾರುಕಟ್ಟೆಯಲ್ಲಿ ಉಸಿರಾಟಕ್ಕೂ ಕಷ್ಟವಾಗುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ.

ರೇಷ್ಮೆ ಮಾರುಕಟ್ಟೆ ತೆರೆದರೆ, ಮಾರುಕಟ್ಟೆಗೆ ಬರುವ ವಾಹನಗಳಿಗೆ ಮುಕ್ತ ಪ್ರವೇಶ ನೀಡಬೇಕಾಗುತ್ತದೆ. ದೂರದ ಜಿಲ್ಲೆಗಳಿಂದ ಬರುವವರು ಸಹ ಇದೇ ಕಾರಣ ಕೊಟ್ಟು ಗಡಿ ದಾಟಬಹುದು. ಮಾತ್ರವಲ್ಲದೆ ಚಾಲಕರಿಗೆ, ಬೆಳೆಗಾರರಿಗೆ ಊಟ, ವಿಶ್ರಾಂತಿ, ಟೀ-ಕಾಫಿ ಎಲ್ಲ ವ್ಯವಸ್ಥೆಗಳಿಗಾಗಿ ಹೋಟಲ್‍ಗಳನ್ನು ಸಹ ತೆರೆಯಬೇಕಾಗುತ್ತದೆ. ಬೇಕರಿಗಳು ಸಹ ಜಿಲ್ಲಾಡಳಿತದ ದುಂಬಾಲು ಬೀಳುವುದು ಸರ್ವೇ ಸಾಮಾನ್ಯವಾಗುತ್ತದೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ