Breaking News
Home / ಜಿಲ್ಲೆ / ತರಬೇತಿ ಸಮಯದಲ್ಲಿ ತಲೆಗೆ ಪೆಟ್ಟು ಬಿದ್ದು ಯೋಧ ಸಾವು

ತರಬೇತಿ ಸಮಯದಲ್ಲಿ ತಲೆಗೆ ಪೆಟ್ಟು ಬಿದ್ದು ಯೋಧ ಸಾವು

Spread the love

ಧಾರವಾಡ, ಫೆ.24-ಭಾರತೀಯ ಸೇನೆಯ ತರಬೇತಿಯ ಸಮಯದಲ್ಲಿ ತಲೆಗೆ ಬಲವಾದ ಏಟು ಬಿದ್ದು, ಯೋಧನೊಬ್ಬ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗಪುರ ಸೇನಾ ಕ್ಯಾಂಪ್‍ನಲ್ಲಿ ನಡೆದಿದೆ. ಧಾರವಾಡ ತಾಲೂಕಿನ ನಿಗದಿ ಗ್ರಾಮದ ಮಹೇಶ್ ಸಿಂಗನಹಳ್ಳಿ (20) ಮೃತಪಟ್ಟ ಯೋಧ.

ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ಸೇನೆಗೆ ಸೇರಿದ್ದ ಇವರು ತಂದೆ-ತಾಯಿ, ಓರ್ವ ಸಹೋದರ, ಇಬ್ಬರು ಸಹೋದರಿಯನ್ನು ಅಗಲಿದ್ದಾರೆ. ಇಂದು ಯೋಧನ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ಆಗಮಿಸಲಿದ್ದು, ಯೋಧನ ಅಗಲಿಕೆಯಿಂದ ಗ್ರಾಮದಲ್ಲಿ ನೀರವ ಮೌನ ಮನೆ ಮಾಡಿದೆ. ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.


Spread the love

About Laxminews 24x7

Check Also

ವನ್ಯಜೀವಿಗಳ ದಾಹ ತೀರಿಸುವ ಕೃತಕ ನೀರಿನ ತೊಟ್ಟಿಗಳು

Spread the loveಹಾನಗಲ್: ಕಡು ಬೇಸಿಗೆ ನಾಡಿನೆಲ್ಲೆಡೆ ಕುಡಿಯುವ ನೀರಿಗೆ ಅಭಾವ ಸೃಷ್ಟಿಸಿದೆ. ಕಾಡಿನಲ್ಲಿ ವನ್ಯ ಜೀವಿಗಳು ಅನುಭವಿಸುತ್ತಿರುವ ಸಂಕಷ್ಟ ಅರಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ