Breaking News

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Spread the love

ತಲ್ಲೂರ: ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಆಸಕ್ತಿಯಿಂದ ಓದಿದರೆ ಖಂಡಿತ ಯಶಸ್ಸು ಪಡೆಯಬಹುದು ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಸಮೀಪದ ಜಾಲಿಕಟ್ಟಿ ಗ್ರಾಮದಲ್ಲಿ ಈಚೆಗೆ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ
ಸಾಧಕ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿ ಜೀವನಕ್ಕೆ ವಿದ್ಯೆ ಬಹಳ ಅವಶ್ಯ. ಪಾಲಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂದರು.
ಗ್ರಾಪಂ ಮಾಜಿ ಅಧ್ಯಕ್ಷ ಬಸವರಾಜ ಕಡಬಿ ಮಾತನಾಡಿದರು. ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.
ಸವದತ್ತಿ ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ಮಾಜಿ ಎಪಿಎಂಸಿ ಅಧ್ಯಕ್ಷ ಪ್ರಕಾಶ ನರಿ, ಗ್ರಾಪಂ ಮಾಜಿ ಸದಸ್ಯ ಚನ್ನಯ್ಯ ಪೂಜೇರ, ವಿರೂಪಾಕ್ಷಯ್ಯ ಪೂಜೇರಿ, ವೈ.ಎ್. ನಾಯ್ಕರ, ಮಲ್ಲಿಕಾರ್ಜುನ ಯಡಳ್ಳಿ, ಮಲ್ಲನಾಯ್ಕ ನಾಯ್ಕರ, ಬಸವರಾಜ ಕುಂಬಾರ, ಬಸಪ್ಪ ಬಡ್ರೋಳ್ಳಿ, ಈರಯ್ಯ ಗೌಡರ, ಗೌಡಪ್ಪ ನಾಯ್ಕರ, ವೆಂಕಣ್ಣ ಯರಡ್ಡಿ, ವೆಂಕಣ್ಣ ಕಮಕೇರಿ, ಕಲ್ಮೇಶ ಯಡಳ್ಳಿ, ಗಂಗಯ್ಯ ಗೌಡರ, ಪ್ರಕಾಶ ನಾಯ್ಕರ, ನಿಂಗಪ್ಪ ಬೀರಪ್ಪನವರ, ಕಲ್ಮೇಶ ಬಾಲರೆಡ್ಡಿ ಇತರರಿದ್ದರು.

Spread the love

About Laxminews 24x7

Check Also

ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ವಿಭಾಗೀಯ ಪೀಠ ಷರತ್ತುಬದ್ಧ ಅನುಮತಿ

Spread the loveಕಲಬುರಗಿ/ಬೀದರ್: ಜೂನ್ 28ರಂದು ಬೀದರ್‌ನ ಬಸವಕಲ್ಯಾಣದಲ್ಲಿ ನಡೆಯಲಿರುವ ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ಕರ್ನಾಟಕ ಹೈಕೋರ್ಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ