Breaking News

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ – ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

Spread the love

ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸತ್ತ ಮಹಿಳೆಯರ ಬೆತ್ತಲೆ ಫೋಟೋ ಕ್ಲಿಕ್ಕಿಸುತ್ತಿದ್ದ ಅಮಾನವೀಯ ಘಟನೆ ನಡೆದಿದ್ದು, ಈ ಘಟನೆಗೆ ರಾಜ್ಯ ಮಹಿಳಾ ಆಯೋಗ ಪ್ರತಿಕ್ರಿಯೆ ನೀಡಿದೆ.

ಘಟನೆ ಸಂಬಂಧಿಸಿದಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ವರದಿ ನೀಡುವಂತೆ ಆರೋಗ್ಯ ಇಲಾಖೆಗೆ ಕೇಳಿದೆ.

ಬೀದರ್‌ ಜಿಲ್ಲೆಯ ಬ್ರಿಮ್ಸ್‌ ಆಸ್ಪತ್ರೆಯ ಶವಾಗಾರದಲ್ಲಿ ಅಟೆಂಡರ್‌ ಮುನೀರ್‌ ಅಹಮದ್‌ ಎಂಬಾತ ಸತ್ತ ಮಹಿಳೆಯರ ಬೆತ್ತಲೆ ಫೋಟೋಗಳನ್ನ ಶೂಟ್‌ ಮಾಡಿ ವಿಕೃತಿ ಮೆರೆದಿರುವ ಅಮಾನುಷ ಕೃತ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವರದಿಯಾಗಿದೆ. ಈ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಮುನೀರ್‌ ಅಹಮದ್‌ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದೆ ಎಂದು ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ರಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಸತ್ತ ಮಹಿಳೆಯರ ಬೆತ್ತಲೆ ಫೋಟೋ ಶೂಟ್ ಮಾಡಿ ವಿಕೃತಿ ಮೆರೆದಿದ್ದಾನೆ. ಶವಾಗಾರ ಕೋಣೆಯ ಅಟೆಂಡರ್ ಮುನೀರ್ ಅಹ್ಮದ್ ಎಂಬಾತನಿಂದ ಈ ಹೀನ ಕೃತ್ಯವಾಗಿದೆ.

ಪಿಎಂಇ ಮಾಡುವ ಕಾಲಕ್ಕೆ ಅನುಮತಿ ಇಲ್ಲದೇ ತನ್ನ ಮೊಬೈಲ್‌ನಲ್ಲಿ ಮುನ್ನಿರ್ ಸತ್ತ ಮಹಿಳೆಯರ ಶವದ ಮೇಲಿನ ಬಟ್ಟೆ ತೆಗೆದು ಫೋಟೋ ತೆಗೆದುಕೊಳ್ತಿದ್ದನಂತ್ತೆ. ಮಹಿಳೆಯರ ಬೆತ್ತಲೆ ಫೋಟೋ ಕ್ಲಿಕ್ಕಿಸಿಕೊಂಡು ಮೊಬೈಲ್‌ನಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದನಂತೆ ಆರೋಪಿ ಮುನೀರ್.

ಕೃತ್ಯದಿಂದ ಮಹಿಳೆಯರ ಘನತೆ, ಕುಟುಂಬಸ್ಥರ ಗೌರವ, ವೈದ್ಯಕೀಯ ಗೌಪ್ಯತೆಗೆ ಧಕ್ಕೆಯಾಗಿದೆ. ಸದ್ಯ ಆರೋಪಿ ಮುನೀರ್‌ ವಿರುದ್ಧ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ ಸೆಕ್ಷನ್‌ 301, 62 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ