Breaking News

ಸರ್ಕಾರಿ ಅನುದಾನ ₹50 ಲಕ್ಷ ಬಿಡುಗಡೆಗೆ ಕ್ರಮ: ಚನ್ನರಾಜ ಹಟ್ಟಿಹೊಳಿ ಭರವಸೆ

Spread the love

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುತಗಾ ಗ್ರಾಮದ ಐತಿಹಾಸಿಕ ಹಾಗೂ ಪ್ರಸಿದ್ಧ ಶ್ರೀ ಮರಗಾಯಿ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ವೇಗ ನೀಡುವ ಉದ್ದೇಶದಿಂದ ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಕುಟುಂಬದ ವತಿಯಿಂದ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಲಾಯಿತು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಮುತಗಾ ಗ್ರಾಮಕ್ಕೆ ಭೇಟಿ ನೀಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳಿಗೆ ಆರ್ಥಿಕ ನೆರವನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಚನ್ನರಾಜ ಹಟ್ಟಿಹೊಳಿ, ಮುತಗಾ ಗ್ರಾಮದ ಶ್ರೀ ಮರಗಾಯಿ ಮಂದಿರವು ಭಕ್ತರ ನಂಬಿಕೆ ಮತ್ತು ಧಾರ್ಮಿಕ ಭಾವನೆಗಳ ಕೇಂದ್ರವಾಗಿದೆ. ಇಂತಹ ಪುರಾತನ ಹಾಗೂ ಐತಿಹಾಸಿಕ ದೇವಸ್ಥಾನಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಕುಟುಂಬವು ವೈಯಕ್ತಿಕವಾಗಿ ನೆರವು ನೀಡಿರುವುದಾಗಿ ಹೇಳಿದರು.

ಅಲ್ಲದೆ, ಮಂದಿರದ ಸಮಗ್ರ ಅಭಿವೃದ್ಧಿ ಮತ್ತು ಮೂಲಸೌಕರ್ಯ ವಿಸ್ತರಣೆಗಾಗಿ ಕರ್ನಾಟಕ ಸರ್ಕಾರದಿಂದ ₹50 ಲಕ್ಷಗಳ ವಿಶೇಷ ಅನುದಾನವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಯ ಕುರಿತು ಮಾತನಾಡಿದ ಅವರು, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಮಾರ್ಗದರ್ಶನದಲ್ಲಿ ಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲೂ ರಸ್ತೆ, ಕುಡಿಯುವ ನೀರು, ಸಮುದಾಯ ಭವನ, ದೇವಸ್ಥಾನಗಳ ಅಭಿವೃದ್ಧಿ ಸೇರಿದಂತೆ ಮೂಲಸೌಕರ್ಯ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದೆ. ಪ್ರತಿಯೊಂದು ಹಳ್ಳಿಯನ್ನೂ ಸರ್ವಾಂಗೀಣವಾಗಿ ಅಭಿವೃದ್ಧಿಪಡಿಸಿ, ಗ್ರಾಮಗಳ ಚಿತ್ರಣವನ್ನು ಬದಲಾಯಿಸುವ ಜೊತೆಗೆ ಜನರ ಜೀವನಮಟ್ಟವನ್ನು ಸುಧಾರಿಸುವ ಗುರಿಯೊಂದಿಗೆ ನಿರಂತರವಾಗಿ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ಗ್ರಾಮಸ್ಥರು ದೇವಸ್ಥಾನದ ಅಭಿವೃದ್ಧಿಗೆ ಕೈಗೊಂಡಿರುವ ಪ್ರಯತ್ನವನ್ನು ಶ್ಲಾಘಿಸಿದ ಅವರು, ಸರ್ಕಾರ ಮತ್ತು ಜನರ ಸಹಭಾಗಿತ್ವದಿಂದ ದೇವಸ್ಥಾನವನ್ನು ಇನ್ನಷ್ಟು ಸುಂದರ ಹಾಗೂ ಭಕ್ತರಿಗೆ ಅನುಕೂಲಕರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ದೇವಸ್ಥಾನದ ಪಂಚ ಕಮಿಟಿಯ ಸದಸ್ಯರು, ಗ್ರಾಮಸ್ಥರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದು, ಲಕ್ಷ್ಮೀ ಹೆಬ್ಬಾಳಕರ್ ಕುಟುಂಬದ ನೆರವಿಗೆ ಕೃತಜ್ಞತೆ ಸಲ್ಲಿಸಿದರು.


Spread the love

About Laxminews 24x7

Check Also

ಟೌನ್‌ಶಿಪ್ ಗಲಾಟೆಯಿಂದ ಸರ್ವೆ ಕಾರ್ಯ ಸ್ಥಗಿತ, ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ: ಎಸ್ಪಿ ಶ್ರೀನಿವಾಸ್ ಗೌಡ ಎಚ್ಚರಿಕೆಟೌನ್‌ಶಿಪ್ ಗಲಾಟೆಯಿಂದ ಸರ್ವೆ ಕಾರ್ಯ ಸ್ಥಗಿತ, ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ: ಎಸ್ಪಿ ಶ್ರೀನಿವಾಸ್ ಗೌಡ ಎಚ್ಚರಿಕೆ

Spread the loveರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಗಲಾಟೆ ಬಳಿಕ ಇಂದಿನ ಸರ್ವೆ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅಧಿಕಾರಿಗಳು ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ