Breaking News

ಕಲ್ಲು ಕ್ವಾರಿ ದುರಂತ – ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಲಿ: ಹೆಚ್‌ಡಿಕೆ

Spread the love

ಬೆಂಗಳೂರು: ಕಲ್ಲು ಕ್ವಾರಿ ದುರಂತದಲ್ಲಿ ಮೃತರಾದವರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಕೊಡಬೇಕು ಅಂತ ಕೇಂದ್ರ ಸಚಿವ ಕುಮಾರಸ್ವಾಮಿಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು Xನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಕಲ್ಲು ಕ್ವಾರಿಯ ಬಂಡೆ ಕುಸಿದು ಏಳು ಜನ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ಅತೀವ ನೋವುಂಟು ಮಾಡಿದೆ. ಮೃತಪಟ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಹಾಗೂ ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ರಾಜ್ಯ ಸರ್ಕಾರ ನೊಂದ ಕುಟುಂಬಗಳಿಗೆ ತಕ್ಷಣವೇ ಸೂಕ್ತ ಪರಿಹಾರ ನೀಡುವುದರ ಜೊತೆಗೆ ಇನ್ನಿತರ ತುರ್ತು ನೆರವು ಒದಗಿಸಬೇಕು. ಅಲ್ಲದೇ ಕ್ವಾರಿಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳನ್ನು ಜಾರಿಗೆ ಕ್ರಮ ವಹಿಸಿ ಸಂಬಂಧಿತ ಇಲಾಖೆ ತೀವ್ರ ನಿಗಾ ಇರಿಸುವಂತೆ ಆದೇಶಿಸಬೇಕು ಎಂದಿದ್ದಾರೆ.

ಇಂಥ ಕಠಿಣ ಕ್ರಮಗಳು ಆಗದಿರುವ ಕಾರಣಕ್ಕೆ ಈ ರೀತಿಯ ದುರಂತಗಳು ಮರುಕಳಿಸುತ್ತಿವೆ. ರಾಜ್ಯದಲ್ಲಿ ಪದೇ ಪದೇ ಕ್ವಾರಿ ದುರಂತಗಳು ಸಂಭವಿಸುತ್ತಿದ್ದರೂ ಯಾರ ಮೇಲೆಯೂ ಕ್ರಮ ಆಗಿಲ್ಲ ಎನ್ನುವುದು ಅತ್ಯಂತ ಬೇಸರದ ಸಂಗತಿ. ಕ್ವಾರಿ ಮಾಲೀಕರು ಕೂಡ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ವಹಿಸಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಸಾರಿಗೆ ನೌಕರರಿಗೆ ಸಿಹಿ ಸುದ್ದಿ – ಈ ತಿಂಗಳಿನಿಂದಲೇ ಅಕೌಂಟ್‌ಗೆ ಪರಿಷ್ಕೃತ ವೇತನ ಜಮೆ

Spread the loveಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಕೊನೆಗೂ ವೇತನ ಹೆಚ್ಚಳ ಮಾಡಿ ಆದೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ