Breaking News

ಇಳಕಲ್‌ನಲ್ಲಿ ಬೀದಿನಾಯಿಗಳ ಅಟ್ಟಹಾಸ: ಬಾಲಕಿ ಸೇರಿದಂತೆ ಇಬ್ಬರ ಮೇಲೆ ದಾಳಿ, ಬೆಚ್ಚಿಬಿದ್ದ ನಾಗರಿಕರು!

Spread the love

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಬೀದಿನಾಯಿಗಳ ಕಾಟ ಮಿತಿಮೀರಿದೆ. ಕಳೆದ ಕೆಲ ದಿನಗಳಿಂದ ನಿರಂತರ ದಾಳಿ ನಡೆಸುತ್ತಿರುವ ಬೀದಿನಾಯಿಗಳು, ಇದೀಗ ಮತ್ತೆ ಬಾಲಕಿ ಮತ್ತು ಯುವಕನನ್ನು ಗುರಿಯಾಗಿಸಿಕೊಂಡಿವೆ.

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಬೀದಿನಾಯಿಗಳ ಹಾವಳಿ ಮುಂದುವರಿದಿದ್ದು, ಜನಸಾಮಾನ್ಯರು ಭಯದ ನೆರಳಲ್ಲಿ ಬದುಕುವಂತಾಗಿದೆ. ನಗರದ ಕುಲಕರ್ಣಿ ಪೇಟೆಯಲ್ಲಿ ನಿನ್ನೆ ಮತ್ತೆ ಇಬ್ಬರ ಮೇಲೆ ದಾಳಿ ನಡೆಸುವ ಮೂಲಕ ನಾಯಿಗಳು ತಮ್ಮ ಕ್ರೌರ್ಯವನ್ನು ಮೆರೆದಿವೆ. ಮನೆಯ ಹೊರಗೆ ನಿಂತಿದ್ದ 6 ವರ್ಷದ ಬಾಲಕಿ ಶ್ರೀನಿಧಿ ಮಡಿವಾಳ ಹಾಗೂ ಕೆಲಸದ ನಿಮಿತ್ತ ತೆರಳುತ್ತಿದ್ದ ಯಾಸೀನ್ ಸಾಬ್ ಎಂಬುವವರ ಮೇಲೆ ನಾಯಿಗಳು ಏಕಾಏಕಿ ದಾಳಿ ಮಾಡಿ ಗಾಯಗೊಳಿಸಿವೆ.

ಒಂದೇ ಬಡಾವಣೆಯಲ್ಲಿ ನಡೆದ ಈ ಘಟನೆಗಳಿಂದ ಸ್ಥಳೀಯರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಸರಣಿ ದಾಳಿ ನಡೆಸುತ್ತಿರುವ ಈ ನಾಯಿಗಳಿಗೆ ಹುಚ್ಚು ಹಿಡಿದಿರಬಹುದು ಎಂಬ ಶಂಕೆ ಸ್ಥಳೀಯರಲ್ಲಿ ದಟ್ಟವಾಗಿದೆ. ಕೇವಲ ಈ ಘಟನೆ ಮಾತ್ರವಲ್ಲದೆ, ಇಳಕಲ್ ನಗರದಲ್ಲಿ ಈ ಹಿಂದೆ 35ಕ್ಕೂ ಹೆಚ್ಚು ಜನರ ಮೇಲೆ ಇದೇ ರೀತಿ ಬೀದಿನಾಯಿಗಳು ದಾಳಿ ಮಾಡಿದ್ದು, ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪದೇ ಪದೇ ನಡೆಯುತ್ತಿರುವ ಈ ದಾಳಿಗಳಿಂದ ಬೇಸತ್ತಿರುವ ಪೋಷಕರು ಮತ್ತು ಸ್ಥಳೀಯರು, ಮುನ್ಸಿಪಲ್ ಆಡಳಿತದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೀದಿನಾಯಿಗಳ ಹಾವಳಿಯನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮತ್ತು ನಾಯಿಗಳಿಗೆ ಲಸಿಕೆ ಹಾಕಿ ನಿಯಂತ್ರಣಕ್ಕೆ ತರುವಂತೆ ಒತ್ತಾಯಿಸಿದ್ದಾರೆ. ಇನ್ನು ಮುಂದಾದರೂ ಆಡಳಿತ ವರ್ಗ ಎಚ್ಚೆತ್ತುಕೊಂಡು ಜನರ ಪ್ರಾಣಕ್ಕೆ ರಕ್ಷಣೆ ನೀಡುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.


Spread the love

About Laxminews 24x7

Check Also

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Spread the loveಬೆಂಗಳೂರು:  ಸುರಿದ ಭಾರೀ ಮಳೆಗೆ ನಡೆದ ಅವಾಂತರಗಳು ಒಂದಾ.. ಎರಡಾ..? ಬೇಸಿಗೆ ಮಳೆಗೆ ಇಡೀ ಸಿಲಿಕಾನ್ ಸಿಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ