ಬೆಳಗಾವಿ: ಇಲ್ಲಿನ ಸದಾಶಿವ ನಗರದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ.
ಎಸ್.ಆರ್.ಕಳ್ಳಿಗುದ್ದಿ(16) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಲಾಕ್ ಡೌನ್ ಹಿನ್ನೆಲೆಯ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಇದರಿಂದ ಪೋಷಕರು ಸಮಯವನ್ನು ಹಾಳು ಮಾಡದೆ ಪರೀಕ್ಷೆಗೆ ಓದಿಕೊಳ್ಳುವಂತೆ ಬುದ್ದಿ ಹೇಳಿದ್ದಾರೆ. ಇದರಿಂದ ಮನನೊಂದು ಶನಿವಾರ ರಾತ್ರಿಯೇ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.