Breaking News

ಕ್ಷೇತ್ರದ ಸಹೋದರಿಯರ ಬಾಳಿಗೆ ಆಸರೆ: 28 ಕುಟುಂಬಗಳಿಗೆ “ಅಣ್ಣನ ಉಡುಗೊರೆ” ವಿತರಣೆ

Spread the love

ಸವದತ್ತಿ: ನನ್ನ ಕ್ಷೇತ್ರದ ಪ್ರತಿಯೊಂದು ಬಡ ಕುಟುಂಬದ ಕಷ್ಟ-ಸುಖಗಳಿಗೆ ಸ್ಪಂದಿಸುವುದು ನನ್ನ ಮೊದಲ ಆದ್ಯತೆಯಾಗಿದೆ. ಇಂದು ಮದುವೆಯ ಸಂಭ್ರಮದಲ್ಲಿರುವ ಸವದತ್ತಿ ಮತಕ್ಷೇತ್ರದ ಸುಮಾರು 28 ಬಡ ಕುಟುಂಬಗಳ ಹೆಣ್ಣುಮಕ್ಕಳ ವಿವಾಹಕ್ಕೆ “ಅಣ್ಣನ ಉಡುಗೊರೆ”ಯನ್ನು ನನ್ನ ಧರ್ಮಪತ್ನಿಯವರಾದ ಶ್ರೀಮತಿ Shruti Vaidya (ಶೃತಿ ವಿಶ್ವಾಸ್ ವೈದ್ಯ) ಅವರು ವಿತರಿಸಿದರು.

​ಹೊಸ ಬಾಳಿಗೆ ಪಾದಾರ್ಪಣೆ ಮಾಡುತ್ತಿರುವ ನನ್ನ ಕ್ಷೇತ್ರದ ಸಹೋದರಿಯರಿಗೆ ನೆರವಾಗಲು ಅಡುಗೆ ಮನೆಯ ಭಾಂಡೆ ಸಾಮಗ್ರಿಗಳು, ಟ್ರೇಸುರಿ, ಮಂಚ (ಕಾಟ್) ಹಾಗೂ ಸೀರೆಗಳನ್ನು ಒಳಗೊಂಡ ಗೃಹೋಪಯೋಗಿ ವಸ್ತುಗಳನ್ನು ನೀಡಿ ಶುಭ ಹಾರೈಸಲಾಯಿತು.

​ಜನಸಾಮಾನ್ಯರ ಸೇವಕನಾಗಿ, ಕಷ್ಟದಲ್ಲಿರುವ ಕುಟುಂಬಗಳ ಹೆಗಲಿಗೆ ಹೆಗಲು ಕೊಟ್ಟು ನಿಲ್ಲಲು ನಾನು ಸದಾ ಬದ್ಧನಾಗಿದ್ದೇನೆ. ನವದಂಪತಿಗಳ ಜೀವನ ಸುಖ-ಸಮೃದ್ಧಿಯಿಂದ ಕೂಡಿರಲಿ ಎಂದು ಈ ಮೂಲಕ ಹಾರೈಸುತ್ತೇನೆ.

​ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕುಟುಂಬಸ್ಥರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಸವದತ್ತಿ ಯಲ್ಲಮ್ಮ ದೇವಸ್ಥಾನದ ನೇಮಕಾತಿ ಹಾಗೂ ಮುಜರಾಯಿ ಇಲಾಖೆ ಸಿಬ್ಬಂದಿಗಳ ಹಿತರಕ್ಷಣೆಗಾಗಿ ವಿಧಾನಸಭೆಯಲ್ಲಿ ಧ್ವನಿ!

Spread the love​ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭಾ ಬಜೆಟ್ ಅಧಿವೇಶನದಲ್ಲಿ, ಸವದತ್ತಿ ಯಲ್ಲಮ್ಮ ಕ್ಷೇತ್ರದ ಪರವಾಗಿ ಧಾರ್ಮಿಕ ದತ್ತಿ ಇಲಾಖೆಯ (ಮುಜರಾಯಿ) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ