ಬೆಂಗಳೂರು: ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಯಲಹಂಕ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರನ್ನು ನಾಮಕರಣ ಮಾಡಿದೆ. ಇಂದು ನಾಮಕರಣದ ಕಾರ್ಯಕ್ರಮವನ್ನು ಸಿಎಂ ಯಡಿಯೂರಪ್ಪನವರು ಉದ್ಘಾಟನೆ ಮಾಡಿದ್ದಾರೆ. ಯಲಹಂಕದ ಡೈರಿ ಸರ್ಕಲ್ ಬಳಿ ಇರುವ ಮೇಲ್ಸೇತುವೆಗೆ ವೀರ ಸಾವರ್ಕರ್ ಅವರ ಹೆಸರನ್ನು ಇಡಲಾಗಿದೆ. 388.35 ಮೀಟರ್ ಉದ್ದದ ಈ ಮೇಲ್ಸೇತುವೆಯನ್ನು ಬಿಬಿಎಂಪಿಯಿಂದ 34 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡಲು ಕಾಂಗ್ರೆಸ್, ಜೆಡಿಎಸ್ ವಿರೋಧಿಸಿತ್ತು. ಹೀಗಾಗಿ …
Read More »