Breaking News

ಮೈ ಭಾರತ ಪೋರ್ಟಲ್‌ನಲ್ಲಿ ಯುವಕರ ನೋಂದಣಿಗೆ ಕ್ರಮ ವಹಿಸಿ: ಡಿಸಿ ಮೊಹಮ್ಮದ್ ರೋಷನ್

Spread the love

ಬೆಳಗಾವಿ: ಪಾಲುದಾರ ಇಲಾಖೆಗಳು ಬೆಳಗಾವಿಯ ಮಾಯ್ ಭಾರತ ಕೇಂದ್ರದೊಂದಿಗೆ ಸಮನ್ವಯದಿಂದ ಕೆಲಸ ಮಾಡುವುದರ ಮೂಲಕ ಮಾಯ್ ಭಾರತ ಪೋರ್ಟಲ್‌ನಲ್ಲಿ ಯುವಕರ ಗರಿಷ್ಠ ನೋಂದಣಿಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ (ಜು.21) ಜರುಗಿದ ಮಾಯ್ ಭಾರತ ಜಿಲ್ಲಾ ಸಲಹಾ ಸಮಿತಿ (ಎಮ್.ವೈ.ಬಿ-ಡಿಎಸಿ), ತೀವ್ರ ಮಾಯ್ ಭಾರತ ನೊಂದಣಿ ಮತ್ತು ಜಾಗೃತಿ ಅಭಿಯಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜುಲೈ 01 ರಿಂದ ಆಗಷ್ಟ 15, 2026 ರವರೆಗೆ ನಡೆಯುತ್ತಿರುವ ತೀವ್ರ ಮಾಯ್ ಭಾರತ ನೊಂದಣಿ ಮತ್ತು ಸಾರ್ವಜನಿಕ ಜಾಗೃತಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಎಲ್ಲಾ ಅರ್ಹ ಯುವಕರು ಮಾಯ್ ಭಾರತ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವಂತೆ ಜಾಗೃತಿ ಮೂಡಿಸಿ ವ್ಯಾಪಕ ಸಂಪರ್ಕವನ್ನು ಖಚಿತಪಡಿಸಿಕೊಳ್ಳಲು ವಿಶೇಷವಾಗಿ ಪ್ರಯೋಜನ ಪಡೆಯಬಹುದು ಎಂದು ಸೂಚಿಸಿದರು.

ಸಮುದಾಯದ ಮಾಯ್ ಭಾರತ ಉಪಕ್ರಮಗಳಲ್ಲಿ ಹೆಚ್ಚಿನ ಯುವಕರ ಭಾಗವಹಿಸುವಿಕೆಯು ತೊಡಗಿಸಿಕೊಳ್ಳುವಿಕೆಯನ್ನು ಬಲಪಡಿಸುತ್ತದೆ ಮತ್ತು ವಿಕ್ಷಿತ್ ಭಾರತದ ದೃಷ್ಟಿಕೋನಕ್ಕೆ ಕೊಡುಗೆ ನೀಡುತ್ತದೆ. 15 ರಿಂದ 29 ವಯಸ್ಸಿನ ಅರ್ಹ ಯುವಕರಿಗೆ  https://mybharat.gov.in/yuva_register ಗೆ ಭೇಟಿ ನೀಡುವ ಮೂಲಕ ಮಾಯ್ ಭಾರತ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಲು ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.

ಜಿಲ್ಲಾ ಯುವ ಅಧಿಕಾರಿಗಳಾದ ಸಂಗ್ರಾಮ ಸಾವಂತ ಅವರು ಮಾಯ್ ಭಾರತ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿಗಳಾದ ಬಸವರಾಜ ಅಡವಿಮಠ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕರಾದ ಬಿ. ಶ್ರೀನಿವಾಸ, ಎನ್.ಸಿ.ಸಿ. ಎನ್.ಎಸ್.ಎಸ್, ಭಾರತ ಸೌಟ್ಸ ಆಂಡ ಗೈಡ್ಸ್ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯಲ್ಲಿ ವಿಕಸಿತ್ ಭಾರತಕ್ಕಾಗಿ ನಶಾ ಮುಕ್ತ ಯುವ ಅಭಿಯಾನದ ಪೋಸ್ಟರ್ ಅನ್ನು ಔಪಚಾರಿಕವಾಗಿ ಬಿಡುಗಡೆ ಮಾಡಲಾಯಿತು.


Spread the love

About Laxminews 24x7

Check Also

ಎಲ್ ನಿನೋ ಎಫೆಕ್ಟ್ – ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಕೊರತೆ

Spread the loveಬೆಂಗಳೂರು: ಎಲ್‌ನಿನೋ ಎಫೆಕ್ಟ್‌ನಿಂದ ರಾಜ್ಯದಲ್ಲಿ ಮಳೆ ಕೊರತೆಯಾಗಿದೆ. ದಕ್ಷಿಣ ಕನ್ನಡ, ಮೈಸೂರು, ಕೊಡಗು, ಉತ್ತರ ಕನ್ನಡ, ಉಡುಪಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ