Breaking News

ಪೊಲೀಸರಿಗೆ ತಲೆನೋವಾಗಿದ್ದ ಮನೆಗಳ್ಳ ಕೊನೆಗೂ ಅರೆಸ್ಟ್

Spread the love

ಬೆಳಗಾವಿ ನಗರದ ಶಹಾಪೂರ ಭಾರತನಗರದಲ್ಲಿ ಮನೆ ಕೀಲಿ ಮುರಿದು ಒಳನುಗ್ಗಿ ಬಂಗಾರದ ಆಭರಣ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಶಹಾಪೂರ ಪೊಲೀಸರು, 45.56 ಲಕ್ಷ ರೂ.ಮೌಲ್ಯದ ಚಿನ್ನಾಭರಣವನ್ನು ಶನಿವಾರ ವಶಪಡಿಸಿಕೊಂಡಿದ್ದಾರೆ.

ದೆಹಲಿಯ ತಿಲಕ ನಗರದ ನಿವಾಸಿ, ಮಿಂಟು ಅಲಿಯಾಸ್ ಚಿಂಟು ಕುಟಿ ವಿಶ್ವಾಸ (52) ಬಂಧಿತ. ಬಂಧಿತನಿಂದ‌ 294.190 ಗ್ರಾಂ ತೂಕದ ಅಂದಾಜು 44,86,390 ರೂ.ಮೌಲ್ಯದ ಗಟ್ಟಿ ಬಂಗಾರ ಹಾಗೂ ಕಳ್ಳತನಕ್ಕೆ ಬಳಸಿದ್ದ 70 ಸಾವಿರ ರೂ.ಮೌಲ್ಯದ ಹೊಂಡಾ ಆಕ್ಟಿವಾ ದ್ವಿಚಕ್ರ ವಾಹನ ಸೇರಿದಂತೆ ಒಟ್ಟು 45,56,390 ರೂ.ಮೌಲ್ಯದ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಕಾರ್ಯಾಚರಣೆಯಲ್ಲಿ ಇನ್ಸಪೆಕ್ಟರ್ ಎಸ್.ಎಸ್. ಸಿಮಾನಿ, ಪಿಎಸ್‌ಐ ಮಣಿಕಂಠ ಪೂಜಾರಿ, ಪ್ರವೀಣ ಬಿರಾದಾರ, ಮಂಜುನಾಥ ಭಜಂತ್ರಿ ಸೇರಿದಂತೆ ಶಾಹಾಪುರ ಠಾಣೆ ಸಿಬ್ಬಂದಿ


Spread the love

About Laxminews 24x7

Check Also

ಎಲ್‌ಆರ್‌ಐ ಯಾತ್ರೆ, ಖೇತ್ ಬಚಾವೋ ಅಭಿಯಾನಕ್ಕೆ ಸಚಿವ ಸತೀಶ್‌ ಜಾರಕಿಹೊಳಿ ಚಾಲನೆ

Spread the loveಗೋಕಾಕ: ಕೃಷಿ ಕ್ಷೇತ್ರದ ಸುಸ್ಥಿರ ಅಭಿವೃದ್ಧಿಗೆ ಜಲ ಸಂರಕ್ಷಣೆ ಮತ್ತು ಮಣ್ಣಿನ ಆರೋಗ್ಯ ಕಾಪಾಡುವುದು ಅತ್ಯಂತ ಅಗತ್ಯವಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ