Breaking News

ಶಾಹುನಗರದ ಸ್ಮಶಾನ ಭೂಮಿ ಇದನ್ನು ಉಳಿಸಿಕೊಡುವಂತೆ ಡೊಂಬರ ಸಮುದಾಯದ ಆಗ್ರಹ

Spread the love

ಬೆಳಗಾವಿ: ಖಾನಾಪುರ ತಾಲೂಕಿನ ಶಾಹುನಗರದಲ್ಲಿ ಡೊಂಬರ ಸಮುದಾಯದ ಸ್ಮಶಾನ ಭೂಮಿ ಕಬಳಿಸುವ ಹುನ್ನಾರ ನಡೆದಿದ್ದು, ಇದನ್ನು ಉಳಿಸಿಕೊಡುವಂತೆ ಆಗ್ರಹಿಸಿ ನಗರದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು.
ನಗರದ ಡಾ.ಬಿ.ಆರ್.ಅಂಬೇಡ್ಕರ ಉದ್ಯಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ‌್ಯಾಲಿಯಲ್ಲಿ ಆಗಮಿಸಿದ ನಿವಾಸಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ರಿಗೆ ಮನವಿ ಸಲ್ಲಿಸಿದರು.
ಖಾನಾಪುರ ತಾಲೂಕಿನ ಶಾಹುನಗರದ ಸರ್ವೆ ನಂ 39/ಎ1 ರಲ್ಲಿ ಬರುವ ಪ್ರದೇಶದಲ್ಲಿ ಪೂರ್ವಜರ ಕಾಲದಿಂದಲೂ ಡೊಂಬರ ಸಮುದಾಯದವರು ಮರಣ ಹೊಂದಿದಾಗ ಶವಸಂಸ್ಕಾರವನ್ನು ಮಾಡಿಕೊಂಡು ಬಂದಿದ್ದೇವೆ. ಇದು ಸರ್ಕಾರಿ ಗಾಯರಾಣ ಜಮೀನಾಗಿದ್ದರೂ ಕೆಲವರು ಕಬಳಿಸಲು ಹುನ್ನಾರ ನಡೆಸಿದ್ದಾರೆ. ಇಲ್ಲಿರುವ ಕೆಲ ಮರ ಕಡೆದು ಮನೆಗಳನ್ನು ನಿರ್ಮಿಸುತ್ತಿದ್ದಾರೆ. ಈ ಸ್ಮಶಾನಭೂಮಿ ವಿಷಯವಾಗಿ ತಹಸೀಲ್ದಾರ ಮತ್ತು ಪಟ್ಟಣ ಪಂಚಾಯಿತಿಗೆ ಹತ್ತಾರು ಸಲ ಮನವಿ ಸಲ್ಲಸಿದರೂ ಪ್ರಯೋಜನವಾಗಿಲ್ಲ. ಈಗ ಅತಿಕ್ರಮಣಕಾರರು ಬಂದಿದ್ದು, ಈ ಜಮೀನಿನ ಕುರಿತು ಇನ್ನಾದರೂ ಸೂಕ್ತ ಸಮೀಕ್ಷೆ ನಡೆಸಿ, ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು.
ಮಲ್ಲೇಶ ಚೌಗುಲೆ, ರಾಜಶೇಖರ ಹಿಂಡಲಗಿ, ರಾಘವೇಂದ್ರ ಚಲವಾದಿ, ವಿಠ್ಠಲ ಸಗರಮ್ಮನವರ, ದುರ್ಗಪ್ಪ ದಂಡಿನವರ, ರಾಜು ಸೊಂಟಕ್ಕಿ, ಸುಬ್ರಹ್ಮಣ್ಯ ಕಾಂಬಳೆ, ಸಂದೀಪ ಕೋಲಕಾರ, ರವಿ ಮಾದರ, ಕಾರ್ತಿಕ ತಳವಾರ ಇತರರಿದ್ದರು.

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ