Breaking News

ಚುನಾವಣೆ ಸೋಲಿನ ಬೆನ್ನಲ್ಲೇ ಟಿಎಂಸಿ ಮೂವರು ವಕ್ತಾರರ ಅಮಾನತು

Spread the love

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಬಳಿಕ ಪಕ್ಷ ವಿರೋಧಿ ಹೇಳಿಕೆ ನೀಡಿದ ತೃಣಮೂಲ ಕಾಂಗ್ರೆಸ್‌ನ ಮೂವರು ವಕ್ತಾರರನ್ನು ಅಮಾನತು ಮಾಡಲಾಗಿದೆ.

ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪದ ಮೇಲೆ ವಕ್ತಾರರಾದ ಕೊಹಿನೂರ್ ಮಜುಂದಾರ್, ರಿಜು ದತ್ತ ಮತ್ತು ಕಾರ್ತಿಕ್ ಘೋಷ್ ಅವರನ್ನು 6 ವರ್ಷಗಳ ಕಾಲ ಅಮಾನತುಗೊಳಿಸಲಾಗಿದೆ.

ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ, ನಾಯಕತ್ವ ಮತ್ತು ಪಕ್ಷದ ಚುನಾವಣಾ ಕಾರ್ಯತಂತ್ರವನ್ನು ಟೀಕಿಸಿದ ಐವರು ವಕ್ತಾರರಿಗೆ ಪಕ್ಷವು ಶೋಕಾಸ್ ನೋಟಿಸ್ ನೀಡಿತ್ತು. ಅದಾದ ಕೆಲವು ದಿನಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಈ ಫಲಿತಾಂಶದಲ್ಲಿ ಬಿಜೆಪಿ 207 ಸ್ಥಾನಗಳನ್ನು ಗೆದ್ದಿದ್ದರೆ, ಟಿಎಂಸಿ 80 ಸ್ಥಾನಗಳಿಗೆ ಕುಸಿದಿದೆ.

ಪಕ್ಷದ ಶಿಸ್ತು ಸಮಿತಿಯ ಸದಸ್ಯರೂ ಆಗಿರುವ ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಅವರು ನೋಟಿಸ್‌ಗಳನ್ನು ಜಾರಿ ಮಾಡಿದ್ದಾರೆ. ಅಮಾನತುಗೊಂಡ ಮೂವರು ನಾಯಕರಲ್ಲದೆ, ಕೃಷ್ಣೇಂದು ಚೌಧರಿ ಮತ್ತು ಪಪಿಯಾ ಘೋಷ್ ಅವರಿಗೂ ನೋಟಿಸ್ ನೀಡಲಾಗಿದೆ.

ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನು ಭೇಟಿ ಮಾಡಲು ಪಕ್ಷದ ನಾಯಕರು ಗಂಟೆಗಟ್ಟಲೆ ಕಾಯಬೇಕಾಗಿತ್ತು ಎಂದು ಮಜುಂದಾರ್ ಮಾತನಾಡಿದ್ದರು. ಮಾಲ್ಡಾದ ಹಿರಿಯ ನಾಯಕರಾದ ಚೌಧರಿ ಅವರು ಡೈಮಂಡ್ ಹಾರ್ಬರ್ ಸಂಸದರ ಕಾರ್ಯವೈಖರಿಯನ್ನು ಟೀಕಿಸಿದ್ದರು. ಏತನ್ಮಧ್ಯೆ, ದತ್ತಾ ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಚುನಾವಣೋತ್ತರ ಹಿಂಸಾಚಾರವನ್ನು ನಿಗ್ರಹಿಸಲು ಬಿಜೆಪಿ ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ಶ್ಲಾಘಿಸಿದ್ದರು.


Spread the love

About Laxminews 24x7

Check Also

ಸಂತಾನಹರಣ ಚಿಕಿತ್ಸೆ ವೇಳೆ ಕರುಳು ಕಟ್ – ವೈದ್ಯರ ಯಡವಟ್ಟಿನಿಂದ ಮಹಿಳೆ ಸಾವು: ಪತಿ ಆರೋಪ

Spread the loveಚಿಕ್ಕಬಳ್ಳಾಪುರ: ಸಂತಾನಹರಣ ಚಿಕಿತ್ಸೆಗೆ ಒಳಗಾಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಚಿಕಿತ್ಸೆ ವೇಳೆ ಕರುಳು ಕತ್ತರಿಸಿ ವೈದ್ಯರ ಯಡವಟ್ಟು ಮಾಡಿದ್ದಾರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ