ಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ನಿಂದ ಮೇಟಿ ಕುಟುಂಬದವರಿಗೆ ಟಿಕೆಟ್ ಕೊಡುತ್ತೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
‘ಬಾಗಲಕೋಟೆಯಲ್ಲಿ ಗೆಲ್ಲಲು ಎಲ್ಲ ತಯಾರಿ ಮಾಡಿದ್ದೇವೆ. ಪಕ್ಷದ ಹೈಕಮಾಂಡ್ ಹಾಗೂ ಕುಟುಂಬದವರ ನಿರ್ಧಾರ ಅಗತ್ಯ. ಮೇಟಿ ಕುಟುಂಬದ ಒಬ್ಬರಿಗೆ ಟಿಕೆಟ್ ನೀಡುತ್ತೇವೆ’ ಎಂದು ಇಲ್ಲಿ ಪತ್ರಕರ್ತರೊಂದಿಗೆ ತಿಳಿಸಿದರು.
‘ನಿಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗಲಿದೆಯೇ’ ಎಂಬ ಪ್ರಶ್ನೆಗೆ, ‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಯಾವಾಗಲೂ ಚರ್ಚೆ ನಡೆಯುತ್ತದೆ. ಅದು ಇನ್ನೂ ನಿರ್ಧಾರಗೊಂಡಿಲ್ಲ’ ಎಂದು ಉತ್ತರಿಸಿದರು.
Laxmi News 24×7