Breaking News

ದೇಗುಲದಲ್ಲಿ ಬ್ರಾಹ್ಮಣರಿಗೆ ಪಾದಪೂಜೆ ಕೈಬಿಡಿ: ಪುರಾತನ ಆಚರಣೆಗಳು ಕೇರಳಕ್ಕೆ ಅವಮಾನಕರ -ದೇವಸ್ವಂ ಸಚಿವ ಆದೇಶ

Spread the love

ತಿರುವನಂತಪುರ: ದೇಗುಲದಲ್ಲಿ ಬ್ರಾಹ್ಮಣರಿಗೆ ಪಾದಪೂಜೆ ಮಾಡಿದ ಕುರಿತಾದ ಪತ್ರಿಕಾ ವರದಿಯನ್ನು ಆಧರಿಸಿ ಕೇರಳ ಹೈಕೋರ್ಟ್ (Kerala High Court)​ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡಿದೆ. ತ್ರಿಪುನಿತುರಾದಲ್ಲಿ (Tripunithura) ಶ್ರೀ ಪೂರ್ಣತ್ರಯೀಸಾ ದೇವಸ್ಥಾನದಲ್ಲಿ (Sree Poornathrayeesa Temple) 12 ಮಂದಿ ಬ್ರಾಹ್ಮಣರಿಗೆ ಭಕ್ತರು ತಮ್ಮ ಪಾಪಗಳನ್ನು ಕಳೆಯಲು ಕಾಲುತೊಳೆದು ಪಾದಪೂಜೆ ಮಾಡಿದ್ದರು. ಈ ಸಂಬಂಧ ಸ್ಥಳೀಯ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿತ್ತು.

ಆದರೆ ಶ್ರೀ ಪೂರ್ಣತ್ರಯೀಸಾ ದೇವಸ್ಥಾನದ ಅಡಳಿತ ಮಂಡಳಿ ಪರ ವಕೀಲರು ಈ ವರದಿಯನ್ನು ಅಲ್ಲಗಳೆದಿದ್ದು, ಹೀಗೆ ಬ್ರಾಹ್ಮಣರ ಪಾದಪೂಜೆ ಮಾಡಿರುವುದು ದೇವಾಲಯದ ಪ್ರಧಾನ ಅರ್ಚಕರೇ ವಿನಃ ಭಕ್ತರು ಅಲ್ಲ ಎಂದು ಹೇಳಿದ್ದಾರೆ. ಕೊಚ್ಚಿನ್ ದೇವಸ್ವಂ ಮಂಡಳಿ ಈ ಸಂಬಂಧ ಅಫಿಡವಿಟ್​ ಸಲ್ಲಿಸುವಂತೆ ಹೈಕೋರ್ಟ್​ ಸೂಚಿಸಿದೆ. ಫೆಬ್ರವರಿ 25 ಕ್ಕೆ ವಿಚಾರಣೆ ಮುಂದೂಡಲಾಗಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ