ಬೆಂಗಳೂರು: ರಸ್ತೆ ಪಕ್ಕದಲ್ಲಿದ್ದ ಬೃಹತ್ ಮರದ ರೆಂಬೆಯೊಂದು ಬಿದ್ದು ಎರಡು ಕಾರು ಹಾಗೂ ಒಂದು ಸ್ಕೂಟಿ ಜಖಂಗೊಂಡ ಘಟನೆ ಆರ್ಆರ್ ನಗರದ ಹಲಗೆವಡೆರಹಳ್ಳಿಯಲ್ಲಿ ನಡೆದಿದೆ.
ವಾಹನಗಳು ಜಖಂಗೊಂಡಿದ್ದರಿಂದ ಮಾಲೀಕರು ಆತಂಕಕ್ಕೆ ಒಳಗಾಗಿದ್ದಾರೆ. ಇನ್ನೂ ಸರ್ಕಾರಿ ಶಾಲೆ ಪಕ್ಕದಲ್ಲೇ ಈ ಘಟನೆ ನಡೆದಿದೆ. ಈ ವೇಳೆ ಮಕ್ಕಳು ಹಾಗೂ ಜನರು ಸ್ಥಳದಲ್ಲಿ ಇಲ್ಲದೇ ಇದ್ದಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಸ್ಥಳಕ್ಕೆ ಪೊಲೀಸರು ಹಾಗೂ ಜಿಬಿಎ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಬಿಎ ಸಿಬ್ಬಂದಿ ಮರದ ಕೊಂಬೆ ತೆರವುಗೊಳಿಸಿದ್ದಾರೆ.
Laxmi News 24×7