Breaking News

ವಿದ್ಯುತ್‌ ಹಾಯಿಸಿ ಎರಡು ಜಿಂಕೆಗಳ ಬೇಟೆ – ಮೂವರು ಆರೋಪಿಗಳು ಅರೆಸ್ಟ್‌

Spread the love

ಶಿವಮೊಗ್ಗ: ಸಾಗರ  ತಾಲೂಕಿನ ಶರಾವತಿ ವನ್ಯಜೀವಿ ವಲಯದಲ್ಲಿ  ವಿದ್ಯುತ್‌ ತಂತಿ ಹಾಯಿಸಿ ಎರಡು ಜಿಂಕೆ ಬೇಟೆಯಾಡಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ನಾಗವಳ್ಳಿ ಗ್ರಾಮದ ನಿವಾಸಿಗಳಾದ ಬಾನು, ಶಿವು ಹಾಗೂ ಮಹೇಶ್ ಬಂಧಿತ ಆರೋಪಿಗಳು. ಈ ಮೂವರು ಪ್ರಕರಣದ ಎ-2, ಎ-5 ಹಾಗೂ ಎ-6 ಆರೋಪಿಗಳಾಗಿದ್ದಾರೆ. ಪ್ರಕರಣದಲ್ಲಿ ಮೂವರು ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಎ-1 ಷಾಜಿ, ಎ-3 ರಾಮ ಹಾಗೂ ಎ-4 ಶ್ರೀಧರ್ ತಲೆಮರೆಸಿಕೊಂಡಿದ್ದಾರೆ. ಆರೋಪಿಗಳು ಜಿಂಕೆ ಬೇಟೆಯಾಡಿ, ಮಾಂಸ ಮಾಡಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕೋಗಾರಿನ ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಷಾಜಿ ಜಮೀನಿನಲ್ಲಿ ವಿದ್ಯುತ್ ಹರಿಸಿದ್ದರು. ವಿದ್ಯುತ್‌ ತಗುಲಿ ಎರಡು ಗಂಡು ಜಿಂಕೆಗಳು ಸಾವನ್ನಪ್ಪಿದ್ದವು. ಇವುಗಳನ್ನು ಆರೋಪಿಗಳು ಸಾಂಬರು ಕೂಡ ಮಾಡಿದ್ದರು. ಜಿಂಕೆಗಳ ಚರ್ಮ, ಮೂಳೆಯನ್ನು ಮಣ್ಣಿನಡಿ ಹೂತು ಹಾಕಿದ್ದರು.

ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅಡಿ ಪ್ರಕರಣ ದಾಖಲಾಗಿದೆ. ಉಳಿದ ಮೂವರು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.


Spread the love

About Laxminews 24x7

Check Also

ಚಿನ್ನ ಅಡವಿಟ್ಟುಕೊಂಡು ವಂಚನೆ, ನೂರಾರು ಜನಕ್ಕೆ ನಾಮ – ಮೈಸೂರಿನಲ್ಲಿ ಮತ್ತೊಬ್ಬ `ಗೋಲ್ಡ್ ವಂಚಕ’

Spread the loveಮೈಸೂರು: ಚಿನ್ನದ ಹೆಸರಿನಲ್ಲಿ ಗ್ರಾಹಕರಿಗೆ ವಂಚನೆ ಮಾಡಿದ ಸರಣಿ ಅಪರಾಧ ಮೈಸೂರಿನಲ್ಲಿ ಮುಂದುವರಿದಿದೆ. ಚಿನ್ನತಂಬಿ, ಮೋಹನ್‌ಲಾಲ್ ಬಳಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ