ಹುಬ್ಬಳ್ಳಿ: ಲಾಕ್ಡೌನ್ ಹಿನ್ನೆಲೆಯಲ್ಲಿ ಏಪ್ರಿಲ್ 20ರ ನಂತರ ದ್ವಿಚಕ್ರ ವಾಹನ ಸವಾರರಿಗೆ ರಿಲಾಕ್ಸ್ ನೀಡಿದ್ದಕ್ಕೆ ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ವಿರೋಧ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿಯತನಕ ರಾಜ್ಯ ಸರ್ಕಾರ ಒಳ್ಳೆಯ ನಿರ್ಧಾರ ತೆಗೆದುಕೊಂಡಿತ್ತು. ಆದರೆ ಸದ್ಯ ರಾಜ್ಯ ಸರ್ಕಾರ ಲಾಕ್ಡೌನ್ನಲ್ಲಿ ವಿನಾಯಿತಿ ನೀಡಿದ್ದು, ನನಗೆ ಸರಿ ಅನ್ನಿಸುತ್ತಿಲ್ಲ ಎಂದರು.
ಇಲ್ಲಿಯವರೆಗೆ ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕು ಇಲ್ಲ. ಆದರೆ ದ್ವಿಚಕ್ರ ವಾಹನ ಸವಾರರಿಗೆ ರಿಲ್ಯಾಕ್ಸ್ ನೀಡಿದರೆ ಗತಿ ಏನು ಎಂದು ಪ್ರಶ್ನಿಸಿದ ಅವರು, ದ್ವಿಚಕ್ರ ವಾಹನಕ್ಕೆ ರಿಲ್ಯಾಕ್ಸ್ ನೀಡಿದರೇ ಅವರು ಗ್ರಾಮೀಣ ಭಾಗಕ್ಕೆ ಹೋಗುತ್ತಾರೆ. ಯಾರಲ್ಲಿ ಕೊರೊನಾ ಇರುತ್ತೆ ಎಂದು ಯಾರಿಗೆ ಗೊತ್ತು. ಆಗ ಏನಾದರು ಗ್ರಾಮೀಣ ಪ್ರದೇಶದಲ್ಲಿ ಸೋಂಕು ಬಂದರೆ ಏನ್ ಗತಿ ಎಂದು ಆತಂಕ ವ್ಯಕ್ತಪಡಿಸಿದರು.
ಸಾರ್ವಜನಿಕ ಹಿತಾಸಕ್ತಿಯಿಂದ ಸರ್ಕಾರ ತನ್ನ ನಿರ್ಧಾರ ಮರುಪರಿಶೀಲನೆ ಮಾಡಬೇಕು. ಸಿಎಂಗೆ ನಾನು ಮನವಿ ಮಾಡುತ್ತೇನೆ. ಕೇಂದ್ರ ಸರ್ಕಾರದ ನಿರ್ಧಾರದಂತೆ ಲಾಕ್ಡೌನ್ ಇರುವ ಮೇ 3ರವರೆಗೂ ಇದೇ ಪರಸ್ಥಿತಿ ಮುಂದುವರಿಸಬೇಕಿತ್ತು. ಈವಾಗಲೇ ಜನ ಮುಗಿಬಿಳುತ್ತಾರೆ ಈ ರೀತಿ ರಿಲ್ಯಾಕ್ಸ್ ನೀಡಿದರೆ ಹೇಗೆ ಎಂದು ಬಸವರಾಜ್ ಹೊರಟ್ಟಿ ಅಸಮಾಧಾನ ಹೊರ ಹಾಕಿದರು.