Breaking News
Home / ಜಿಲ್ಲೆ / ಉಡುಪಿ / ನಾವು ವಾರದಲ್ಲಿ ಮೂರು ಹೊತ್ತು ಉಪವಾಸ ಮಾಡೋಣ,ಆಹಾರವನ್ನು ತ್ಯಾಗ ಮಾಡಿದರೆ ದೇಶದಲ್ಲಿ ಆಹಾರ ವಸ್ತುಗಳನ್ನು ಉಳಿಸಿದಂತಾಗುತ್ತದ : ಉಡುಪಿ ಅದಮಾರು ಸ್ವಾಮೀಜಿ

ನಾವು ವಾರದಲ್ಲಿ ಮೂರು ಹೊತ್ತು ಉಪವಾಸ ಮಾಡೋಣ,ಆಹಾರವನ್ನು ತ್ಯಾಗ ಮಾಡಿದರೆ ದೇಶದಲ್ಲಿ ಆಹಾರ ವಸ್ತುಗಳನ್ನು ಉಳಿಸಿದಂತಾಗುತ್ತದ : ಉಡುಪಿ ಅದಮಾರು ಸ್ವಾಮೀಜಿ

Spread the love

ಉಡುಪಿ: ದೇಶಾದ್ಯಂತ ಕೊರೊನಾ ವೈರಸ್ ಹಾವಳಿ ಜಾಸ್ತಿಯಾಗಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ದೇಶದಲ್ಲಿ ಆಹಾರ ವಸ್ತುಗಳ ಲಭ್ಯತೆ ಕಷ್ಟವಾಗಲಿದೆ ಎಂದು ಉಡುಪಿ ಅದಮಾರು ಸ್ವಾಮೀಜಿ ಕಳವಳ ವ್ಯಕ್ತಪಡಿಸಿದ್ದಾರೆ.

ದೇಶಕ್ಕೋಸ್ಕರ, ಭಾರತದಲ್ಲಿ ಜೀವಿಸುವ ಮನುಷ್ಯರಿಗೋಸ್ಕರ ನಾವು ತ್ಯಾಗ ಮಾಡಲು ಇದು ಸೂಕ್ತ ಸಮಯ. ಹಾಗಾಗಿ ನಾವು ವಾರದಲ್ಲಿ ಮೂರು ಹೊತ್ತು ಉಪವಾಸ ಮಾಡೋಣ ಎಂದು ಉಡುಪಿ ಕೃಷ್ಣಮಠದ ಪರ್ಯಾಯ ಸ್ವಾಮೀಜಿ ಕರೆ ನೀಡಿದ್ದಾರೆ. ವಾರಕ್ಕೆ ಮೂರು ಹೊತ್ತು ಆಹಾರವನ್ನು ತ್ಯಾಗ ಮಾಡಿದರೆ ದೇಶದಲ್ಲಿ ಆಹಾರ ವಸ್ತುಗಳನ್ನು ಉಳಿಸಿದಂತಾಗುತ್ತದೆ ಎಂದಿದ್ದಾರೆ.

ಸಾಧ್ಯವಾದರೆ ವಾರಕ್ಕೊಂದು ಉಪವಾಸ ಮಾಡಲೂಬಹುದು. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ನಾವು ಕಿಂಚಿತ್ತು ತ್ಯಾಗ ಮಾಡಿದರೆ ದೇಶದ ಭವಿಷ್ಯಕ್ಕೆ ಒಳಿತು ಎಂದು ಪರ್ಯಾಯ ಈಶಪ್ರಿಯ ತೀರ್ಥ ಸ್ವಾಮೀಜಿ ಸಲಹೆ ನೀಡಿದ್ದಾರೆ.

ಉಪವಾಸದ ಸಂಕಲ್ಪ ಮಾಡಿದರೆ ಸರ್ಕಾರದ ಮೇಲಿನ ಹೊರೆಯೂ ಕಡಿಮೆಯಾಗುತ್ತದೆ. ಮುಂದಿನ ಕಷ್ಟದ ದಿನಗಳಿಗೆ ಈಗಿನಿಂದಲೇ ಸಿದ್ಧತೆ ಮಾಡಿದಂತಾಗುತ್ತದೆ ಎಂಬುದು ಪರ್ಯಾಯ ಸ್ವಾಮೀಜಿಗಳ ಅಭಿಪ್ರಾಯವಾಗಿದೆ


Spread the love

About Laxminews 24x7

Check Also

ಇಂದು, ನಾಳೆ ಬೆಂಗಳೂರಿನಲ್ಲಿ ಅಮಿತ್‌ ಶಾ, ಯೋಗಿ ರೋಡ್‌ ಶೋ

Spread the loveಬೆಂಗಳೂರು: ಮೊದಲನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಕ್ಕೆ ದಿನಗಣನೆ ಪ್ರಾರಂಭವಾಗಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ