Breaking News

ಅಂತ್ಯಕ್ರಿಯೆಗೆ ಸಾಗುವಾಗಲೇ ಕಣ್ತೆರೆದ ವೃದ್ಧೆ; ಬದುಕಿ ಮತ್ತೆ ಪ್ರಾಣ ಬಿಟ್ಟು ಅಚ್ಚರಿ!

Spread the love

ಇನ್ನೇನು ಅಂತ್ಯಕ್ರಿಯೆ ಮಾಡಬೇಕೆನ್ನುವಷ್ಟರಲ್ಲಿ ಮೃತಳಾಗಿದ್ದಾಳೆ ಎಂದುಕೊಂಡ ವೃದ್ಧೆ ಕಣ್ತೆರೆದು ನೋಡಿ, ಚಹಾ ಕುಡಿದ ವಿಲಕ್ಷಣ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್​ನಲ್ಲಿ ನಡೆಯಿತು.

ಫಿರೋಜಾಬಾದ್: ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಇತ್ತೀಚೆಗೆ ವಿಲಕ್ಷಣ ಘಟನೆಯೊಂದು ನಡೆದಿದೆ.

ಮೃತಪಟ್ಟಿದ್ದಾಳೆ ಎಂದು ವೈದ್ಯರಿಂದ ಘೋಷಿಸಲ್ಪಟ್ಟ ನಂತರ, ಅಂತ್ಯಕ್ರಿಯೆಗೆ ಕರೆದೊಯ್ಯುವಾಗ ವೃದ್ಧೆಯೊಬ್ಬರು ಕಣ್ಣು ತೆರೆದಿದ್ದು ಅಚ್ಚರಿ ಮೂಡಿಸಿದೆ. ಜಿಲ್ಲೆಯ ಬಿಲಾಸ್‌ಪುರ ಗ್ರಾಮದ ನಿವಾಸಿ ಹರಿಭೇಜಿ (81) ಎಂದು ಗುರುತಿಸಲಾದ ಮಹಿಳೆಯನ್ನು ಡಿಸೆಂಬರ್ 23 ರಂದು ಮೆದುಳಿನ ರಕ್ತಸ್ರಾವದ ಕಾರಣದಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ ಎಂದು ಮಂಗಳವಾರ ಜಿಲ್ಲೆಯ ಟ್ರಾಮಾ ಸೆಂಟರ್‌ನ ವೈದ್ಯರು ಘೋಷಿಸಿದ್ದರು.

‘ವೃದ್ಧೆ ನಿಧನರಾದ ಬಗ್ಗೆ ಸಂಬಂಧಿಕರಿಗೆ ಮಾಹಿತಿ ನೀಡಿದ್ದರಿಂದ ಹಲವಾರು ಸಂಬಂಧಿಕರು, ಪರಿಚಯಸ್ಥರು ಆಕೆಯ ನಿವಾಸಕ್ಕೆ ಆಗಮಿಸಿದ್ದರು. ಅಂತಿಮ ಸಂಸ್ಕಾರಕ್ಕಾಗಿ ಸಿದ್ಧತೆ ನಡೆಸಿ ಅಂತ್ಯಕ್ರಿಯೆಯ ವಸ್ತುಗಳನ್ನು ಸಹ ಖರೀದಿಸಲಾಯಿತು’ ಎಂದು ಮಹಿಳೆಯ ಮಗ ಸುಗ್ರೀವ್ ಸಿಂಗ್ ತಿಳಿಸಿದ್ದಾರೆ. ಆದರೆ ಆ ದಿನ ಕುಟುಂಬ ಸದಸ್ಯರು ವೃದ್ಧೆಯ ಶವವನ್ನು ಅಂತ್ಯಕ್ರಿಯೆಗಾಗಿ ತೆಗೆದುಕೊಂಡು ಹೋಗುತ್ತಿರುವಾಗ ಆಕೆ ಇದ್ದಕ್ಕಿದ್ದಂತೆ ಕಣ್ಣು ತೆರೆದಿದ್ದಾಳೆ.

ಹೀಗಾಗಿ ಪುನಃ ಜೀವಂತವಾದ ಆಕೆಯನ್ನು ಮನೆಗೆ ಮರಳಿ ಕರೆತರಲಾಗಿದೆ. ಕಣ್ಣು ತೆರೆದ 81 ವರ್ಷದ ವೃದ್ಧೆಗೆ ಕುಡಿಯಲು ಚಹಾ ನೀಡಲಾಯಿತು ಮತ್ತು ಆಕೆ ಮತ್ತೆ ಬದುಕುವ ಭರವಸೆ ಮೂಡಿತ್ತು. ಆದರೆ ಕುಟುಂಬಸ್ಥರ ಸಂತೋಷ ಅಲ್ಪಕಾಲಿಕವಾಗಿತ್ತು. ಮನೆಗೆ ಮರಳಿದ ನಂತರ ಆಕೆಯ ಸ್ಥಿತಿಯು ಹದಗೆಟ್ಟಿತು. ಅಂತಿಮವಾಗಿ ವೃದ್ಧೆ ಬುಧವಾರ ನಿಧನರಾದರು ಮತ್ತು ಅವತ್ತೇ ಸಂಜೆ ಅಂತ್ಯಕ್ರಿಯೆ ಮಾಡಲಾಯಿತು.

ಹೀಗೊಂದು ವಿಚಿತ್ರ ಅಂತ್ಯಕ್ರಿಯೆ ನಡೆದಿತ್ತು!: ಸಿವಿಲ್ ಆಸ್ಪತ್ರೆಯ ಶವಾಗಾರದಿಂದ ಕೆಲ ಅಪರಿಚಿತ ವ್ಯಕ್ತಿಗಳು ತಮಗೆ ಸಂಬಂಧವೇ ಇಲ್ಲದ ಯುವಕನೋರ್ವನ ಶವ ತೆಗೆದುಕೊಂಡು ಹೋದ ವಿಚಿತ್ರ ಘಟನೆ ಇತ್ತೀಚೆಗೆ ಲೂಧಿಯಾನದಲ್ಲಿ ನಡೆದಿತ್ತು. ಈ ವಿಷಯ ತಿಳಿದ ನಂತರ ಮೃತನ ಸಂಬಂಧಿಕರು ಆಕ್ರೋಶ ಹೊರಹಾಕಿದ್ದರು. ಆಕ್ರೋಶಗೊಂಡ ಮೃತನ ಸಂಬಂಧಿಕರು ಗುರುವಾರ ಬೆಳಗ್ಗೆ ತಾಯಿ ಮತ್ತು ಮಕ್ಕಳ ಆರೈಕೆ ವಾರ್ಡ್, ತುರ್ತು ಚಿಕಿತ್ಸಾ ವಿಭಾಗ ಮತ್ತು ಹಿರಿಯ ವೈದ್ಯಾಧಿಕಾರಿ (ಎಸ್‌ಎಂಒ) ಕಚೇರಿಯ ಮೇಲೆ ಹಲ್ಲೆ ಮಾಡಿ ಧ್ವಂಸಗೊಳಿಸಿದ್ದರು. ಘಟನೆಯ ನಂತರ, ಆಕ್ರೋಶಗೊಂಡ ಸಂಬಂಧಿಕರನ್ನು ಸಮಾಧಾನಪಡಿಸಲು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದರು.


Spread the love

About Laxminews 24x7

Check Also

35 ಸಾವಿರ ಲಂಚದ ಹಣ ಬಿಸಾಕಿ ಎಸ್ಕೇಪ್,ಕೊನೆಗೂ ಲೋಕಾಯುಕ್ತ ಬಲೆಗೆ ಬಿದ್ದ ಕೋಲಾರ ಸಹಾಯಕ ಡ್ರಗ್ ಕಂಟ್ರೋಲರ್..!!!

Spread the loveಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಲಂಚದ ಹಣ ಬಿಸಾಡಿ ಪರಾರಿಯಾಗಿದ್ದ ಎಫ್‌‌ಡಿಸಿ ಶ್ಯಾಮಲಾ ಹಾಗೂ ಇಬ್ಬರು ಸಹಾಯಕರು ಕೊನೆಗೂ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ