Breaking News

ಸಾರ್ವಜನಿಕ ಅಸ್ತಿ ನಾಶ ಮಾಡಿದ ಪಿಎಫ್‌ಐ ಸದಸ್ಯರ ಸ್ವತ್ತು ಮುಟ್ಟುಗೋಲಿಗೆ ಯುಪಿ ಸರ್ಕಾರ ಕ್ರಮ

Spread the love

ಮುಜಪ್ಫರ್‌ನಗರ: ಸಿಎಎ ವಿರೋಧಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿ ಸಾರ್ವಜಕ ಅಸ್ತಿ ನಾಶ ಮಾಡಿದ್ದ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆಯ ನಾಲ್ವರು ಸದಸ್ಯರಿಂದ ನಷ್ಟ ಭರ್ತಿ ಮಾಡಲು ಉತ್ತರಪ್ರದೇಶ ಸರಕಾರ ಕ್ರಮ ಕೈಗೊಂಡಿದೆ.

ಡಿಸೆಂಬರ್‌ ತಿಂಗಳಲ್ಲಿ ಉತ್ತರಪ್ರದೇಶದ ಕೈರಾನದಲ್ಲಿ ಸಿಎಎ ವಿರೋಧಿಸಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದವು. ಇದರಲ್ಲಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟಗೊಂಡಿತ್ತು. ಇದರ ಸಂಪೂರ್ಣ ಮಾಹಿತಿ ಕಲೆಹಾಕಿದ ಪೊಲೀಸರು, ಈಗ ದೊಂಬಿ ಪ್ರಚೋದಕರಿಂದ ನಷ್ಟ ಭರ್ತಿಗೆ ಕ್ರಮ ಕೈಗೊಂಡಿದ್ದಾರೆ.

ಈ ಪ್ರಕರಣದ ಪ್ರಮುಖ ಆರೋಪಿಗಳಾದ ಪಿಎಫ್‌ಐನ ಡಾ.ಗುಫ್ರಾನ್‌, ಡಾ.ಮುನಾವರ್‌, ಅಹ್ಮದ್‌ ಮತ್ತು ಕರಿ ಅಬ್ದುಲ್‌ ವಾಜಿದ್‌ ಈಗ ತಲೆಮರೆಸಿಕೊಂಡಿದ್ದಾರೆ.

ಇವರ ವಿರುದ್ಧ ಸ್ಥಳೀಯ ನ್ಯಾಯಾಲಯವು ಐಪಿಸಿ ಸೆಕ್ಷನ್‌ 82ರ ಅಡಿಯಲ್ಲಿನೋಟಿಸ್‌ ಹೊರಡಿಸಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ