Breaking News

ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಲಾಟೆ – ನೇಣುಬಿಗಿದ ಸ್ಥಿತಿಯಲ್ಲಿ ಪತ್ನಿ ಶವ ಪತ್ತೆ

Spread the love

ಚಿಕ್ಕಬಳ್ಳಾಪುರ: ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಂಡ ಹಾಗೂ ಹೆಂಡತಿ ಮಧ್ಯೆ ಗಲಾಟೆಯಾಗಿ ಕೊನೆಗೆ ಪತ್ನಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ  ತಾಲೂಕಿನ ಆರ್.ಚೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತಳನ್ನು ವರಲಕ್ಷ್ಮಿ(25) ಎಂದು ಗುರುತಿಸಲಾಗಿದ್ದು, ಗಂಡ ಗಂಗರಾಜು ಪತ್ನಿಯನ್ನು ಕೊಂದು ನೇಣು ಹಾಕಿರುವ ಆರೋಪ ಕೇಳಿಬಂದಿದೆ.

ಘಟನೆ ನಡೆದ ದಿನ ಮೃತ ವರಲಕ್ಷ್ಮಿ ಸ್ನೇಹಿತೆ ಶ್ರಾವಣಿಯ ಪ್ರಿಯಕರ ಕರೆ ಮಾಡಿದ್ದ. ಆತನ ಕರೆಯನ್ನು ವರಲಕ್ಷ್ಮಿ ರಿಸೀವ್ ಮಾಡಿದ್ದಳು. ಇದೇ ವಿಚಾರಕ್ಕೆ ಗಂಡ, ಹೆಂಡತಿ ಮಧ್ಯೆ ಗಲಾಟೆಯಾಗಿತ್ತು. ಪ್ರೇಮಿಗಳ ಮಧ್ಯೆ ಮಧ್ಯಸ್ಥಿಕೆ ವಹಿಸಿಬೇಡಿ ಎಂದು ಗಂಡ ಬುದ್ಧಿವಾದ ಹೇಳಿದ್ದ. ಆದರೆ ಗಲಾಟೆ ತಾರಕಕ್ಕೇರಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ನಿಯ ಶವ ಪತ್ತೆಯಾಗಿದೆ.

ಸದ್ಯ ಮೃತಳ ಕುಟುಂಬಸ್ಥರು ಗಂಡ, ಅತ್ತೆ ಹಾಗೂ ಮಾವನ ವಿರುದ್ಧ ಕೊಲೆ ಆರೋಪ ಹೊರಿಸಿದ್ದಾರೆ. ಸದ್ಯ ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾಗಿದೆ.


Spread the love

About Laxminews 24x7

Check Also

ಇರಾನ್‌ ಸುಪ್ರೀಂ ಲೀಡರ್‌ ಖಮೇನಿ ಖತಂ – ಚಿಕ್ಕಬಳ್ಳಾಪುರದ ಅಲೀಪುರದಲ್ಲಿ 3 ದಿನ ʻಬ್ಲಾಕ್ ಡೇʼ ಆಚರಣೆ

Spread the loveಚಿಕ್ಕಬಳ್ಳಾಪುರ: ಅಮೆರಿಕ – ಇಸ್ರೇಲ್‌ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಅಯಾತೊಲ್ಲ ಅಲಿ ಖಮೇನಿ  ಸಾವಿನಪ್ಪಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ