Breaking News

ಸಾಲಬಾಧೆ: ಅಂಜುಟಗಿಯಲ್ಲಿ ಯುವಕ ಆತ್ಮಹತ್ಯೆ

Spread the love

ವಿಜಯಪುರ: ಸಾಲಬಾಧೆ ಹಿನ್ನೆಲೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದಲ್ಲಿ ನಡೆದಿದೆ. ಪುಂಡಲೀಕ ಹಂಜಗಿ(23) ನೇಣುಬಿಗಿದುಕೊಂಡ ಯುವಕ.

ಅನಾರೋಗ್ಯ ಪೀಡಿತ ತಾಯಿಗೆ ಚಿಕಿತ್ಸೆ ಕೊಡಿಸಲು ಪುಂಡಲೀಕ ಸಾಲಮಾಡಿದ್ದ. ಸಾಲ ಮರುಪಾವತಿಸಲು ಸಾಧ್ಯವಾಗದ ಕಾರಣ ಮನನೊಂದು ನೇಣಿಗೆ ಶರಣಾಗಿದ್ದಾನೆ. ಈತ ಯುವ ರೈತನೂ ಆಗಿದ್ದ. ಆದರೆ ತಪ್ಪು ನಿರ್ಧಾರದಿಂದ ತಮ್ಮವರನ್ನು ಬಿಟ್ಟು ಹೊರಟಿದ್ದಾನೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ