Breaking News

ಭೀಮಾತೀರದ ಮಹಾದೇವ ಸಾಹುಕಾರ್ ಪ್ರಕರಣ : ಒಂದೂವರೆ ಸಾವಿರ ಪೊಲೀಸರು ನಿಯೋಜನೆ

Spread the love

ಭೀಮಾತೀರದ ಮಹಾದೇವ ಸಾಹುಕಾರ್ ಪ್ರಕರಣ : ಒಂದೂವರೆ ಸಾವಿರ ಪೊಲೀಸರು ನಿಯೋಜನೆ

 

ವಿಜಯಪುರ : ಭೀಮಾತೀರದ ಮಹಾದೇವ ಸಾಹುಕಾರ ಭೈರಗೊಂಡ ಮೇಲಿನ ಗುಂಡಿನ ದಾಳಿ ಪ್ರಕರಣ ತನಿಖೆಗಾಗಿ, ಒಂದೂವರೆ ಸಾವಿರ ಪೊಲೀಸರು ಒಳಗೊಂಡ ಹತ್ತು ತಂಡಗಳುನ್ನು ನಿಯೋಜನೆ ಮಾಡಲಾಗಿದೆ.

 

ಅಚ್ಚರಿಯಾದರು ಸತ್ಯ. ಯಾವುದಾದರೂ ಒಂದು ಅಪರಾಧ ಪ್ರಕರಣವನ್ನು ಒಬ್ಬಿಬ್ಬರು ಪೊಲೀಸರು ಅಥವಾ ಹತ್ತಾರು ಪೊಲೀಸರ ಒಂದು ತಂಡ ಬೆನ್ನು ಹತ್ತುವುದು ಸಾಮಾನ್ಯ. ಆದರೆ ಈ ಪ್ರಕರಣದ ತನಿಖೆಗಾಗಿ ವಿಜಯಪುರ ಜಿಲ್ಲೆಯ 1500 ಪೊಲೀಸರನ್ನು ನಿಯೋಜಿಸಲಾಗಿದೆ.

 

ಒಬ್ಬರು ಎಸ್​ಪಿ, ಇನ್ನೊಬ್ಬರು ಹೆಚ್ಚುವರಿ ಎಸ್​ಪಿ, ಅವರೊಂದಿಗೆ 37 ಇನ್​ಸ್ಪೆಕ್ಟರ್​ಗಳು ನೇತೃತ್ವದ ಹತ್ತಕ್ಕೂ ಅಧಿಕ ತಂಡಗಳ ರಚನೆಯಾಗಿದೆ. ಘಟನೆ ನಡೆದ ಸ್ಥಳದ ಸುತ್ತಲೂ 3 ಕಿಲೋಮೀಟರ್​ ವ್ಯಾಪ್ತಿಯಲ್ಲಿ ಪೊಲೀಸರಿಂದ ಶೋಧ ನಡೆಯುತ್ತಿದ್ದು, ಭೀಮಾತೀರದ ಚಡಚಣ, ಕೆರೂರ, ಟಾಕಳಿ, ಉಮರಾಣಿ, ಲೋಣಿ, ಕೊಂಕಣಗಾಂವ ಸುತ್ತಲೂ ಪೊಲೀಸರ ತಂಡ ತನಿಖೆ ನಡೆಸಿದ್ದಾರೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ