Home / ಜಿಲ್ಲೆ / ವಿಷ್ಣುವರ್ಧನ್ ಪುಣ್ಯಸ್ಮರಣೆ ನಿಮಿತ್ಯ ಕರುನಾಡ ಸಿರಿ ಪ್ರಶಸ್ತಿ ಪ್ರಧಾನ ಹಾಗೂ 1001 ಸಸಿ ನೆಡುವ ಕಾರ್ಯಕ್ರಮ

ವಿಷ್ಣುವರ್ಧನ್ ಪುಣ್ಯಸ್ಮರಣೆ ನಿಮಿತ್ಯ ಕರುನಾಡ ಸಿರಿ ಪ್ರಶಸ್ತಿ ಪ್ರಧಾನ ಹಾಗೂ 1001 ಸಸಿ ನೆಡುವ ಕಾರ್ಯಕ್ರಮ

Spread the love

ವಿಷ್ಣುವರ್ಧನ್ ಪುಣ್ಯಸ್ಮರಣೆ ನಿಮಿತ್ಯ ಕರುನಾಡ ಸಿರಿ ಪ್ರಶಸ್ತಿ ಪ್ರಧಾನ ಹಾಗೂ 1001 ಸಸಿ ನೆಡುವ ಕಾರ್ಯಕ್ರಮ

ಜೇವರ್ಗಿ : ಸಹಾಹ ಸಿಂಹ ಡಾ|| ವಿಷ್ಣುವರ್ಧನರವರ 10ನೇ ಪುಣ್ಯಸ್ಮರಣೆ ನಿಮಿತ್ಯ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಐದು ಜನ ಸಾಧಕರಿಗೆ ಹಾಗೂ 1001 ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಾ|| ವಿಷ್ಣುಸೇನಾ ಸಮಿತಿ ತಾಲೂಕ ಅಧ್ಯಕ್ಷರಾದ ಬಸವರಾಜ ಬಾಗೇವಾಡಿ ಹೇಳಿದರು.

ಪಟ್ಟಣದ ಪ್ರವಾಸಿ ಮಂದೀರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿವರ್ಷನು ಕೂಡ ನಾವು ನಮ್ಮ ಸಂಘಟನೆ ವತಿಯಿಂದ ಡಾ|| ವಿಷ್ಣುವರ್ಧನ ಅವರ ಪುಣ್ಯಸ್ಮರಣೆ ಅಂಗವಾಗಿ ಒಂದಲ್ಲ ಒಂದು ವಿನೂತನ ಕಾರ್ಯಕ್ರಮಗಳು ನಡೆಸಿಕೊಂಡು ಬರುತ್ತಿದ್ದು,

ಅದರಂತೆ ಈ ವರ್ಷನು ಕೂಡ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಐದು ಜನರನ್ನು ಗುರುತಿಸಿ ಅವರಿಗೆ ಇದೇ ದಿ.22ರಂದು ಪಟ್ಟಣದ ದಾನಮ್ಮ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಬೆಳಿಗ್ಗೆ 10.30ಗಂಟೆಗೆ ಕರುನಾಡು ಸಿರಿ ಪ್ರಶಸ್ತಿ ಪ್ರಧಾನ ಹಾಗೂ 1001 ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಒಂದು ಕಾರ್ಯಕ್ರಮದಲ್ಲಿ ರಾಜಕೀಯ ಧುರೀಣರು, ತಾಲೂಕ ಮಟ್ಟದ ಅಧಿಕಾರಿಗಳು, ವಿವಿಧ ಮಠಾಧೀಶರು ಹಾಗೂ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಆಗಮಿಸುತ್ತಿದ್ದು, ಕಾರಣ ಡಾ|| ವಿಷ್ಣುವರ್ಧನರವರ ಅಭಿಮಾನಿಗಳು ಹಾಗೂ ಸಂಘಟನೆ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೋಳಿಸಬೇಕೆಂದು ಬಸವರಾಜ ಬಾಗೇವಾಡಿ ಮನವಿ ಮಾಡಿದ್ದಾರೆ.

ಈ ಸುದ್ಧಿಗೋಷ್ಠಿಯಲ್ಲಿ ಮರೆಪ್ಪ ಸರಡಗಿ, ಚಿದಾನಂದ ಭಾವಿಮನಿ, ಶ್ರೀಶೈಲ ದ್ಯಾಮಗೊಂಡ, ಸಿದ್ದು ಗಜ, ಅಖಂಡು, ನಿಂಗು ದೊಡ್ಮನಿ, ಸಿಕ್ರೇಶ್ವರ ಕಟ್ಟಿಸಂಗಾವಿ, ಪರಶುರಾಮ ಜಮಖಂಡಿ ಸೇರಿದಂತೆ ಅನೇಕರು ಇದ್ದರು


Spread the love

About Laxminews 24x7

Check Also

ಪುನೀತ್​ ರಾಜ್​ಕುಮಾರ್ ಅವರು​ ಇಹಲೋಕ ತ್ಯಜಿಸಿ ಇಂದಿಗೆ 2 ವರ್ಷ

Spread the love ಕನ್ನಡದ ಹೆಸರಾಂತ ನಟ ಪುನೀತ್​ ರಾಜ್​ಕುಮಾರ್ ಅವರು​ ಇಹಲೋಕ ತ್ಯಜಿಸಿ ಇಂದಿಗೆ 2 ವರ್ಷವಾಗುತ್ತಿದೆ. ಪುಣ್ಯಸ್ಮರಣೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ