ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ಗಲಗಲಿ ಬ್ಯಾರೇಜ್ನಿಂದ ಮಂಟೂರ ಸಮೀಪದ ಕಾಲುವೆಗೆ ಬೃಹತ್ ಪೈಪ್ಲೈನ್ ಮೂಲಕ ನೀರು ಹರಿಸಲಾಗುತ್ತಿದೆ.
ಬ್ಯಾರೇಜ್ನಿಂದ ನೀರನ್ನು ಪೈಪ್ಲೈನ್ ಮೂಲಕ ಕಾಲುವೆಗೆ ಹರಿಸುವ ಕಾಮಗಾರಿ ನಡೆಯುತ್ತಿದ್ದು, ನೀರು ಕಾಲುವೆಗೆ (Canal Water) ಸೇರುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಮಂಟೂರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗಲಿ ಎಂಬ ಉದ್ದೇಶದಿಂದ ಈ ವ್ಯವಸ್ಥೆ ಮಾಡಲಾಗಿದೆ.
ಸದ್ಯ ಬ್ಯಾರೆಜ್ನಿಂದ ನೀರು ಹರಿಯುತ್ತಿದ್ದು, ಕೃಷಿ ಚಟುವಟಿಕೆಗೆ ಉತ್ತೇಜನ ಸಿಕ್ಕಂತಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ.
Laxmi News 24×7