Breaking News

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ಚಟ್ಟ ಕಟ್ಟಿದ ಪತ್ನಿ!

Spread the love

ಮೈಸೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನ ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ನಡೆದಿದೆ.

ಕುರ್ಣೇಗಾಲದ ಜವರಪ್ಪ ಕೊಲೆಯಾದ ಪತಿ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32), ಕುರ್ಣೆಗಾಲ ಗ್ರಾಮದ ಅಮೃತಾ (26) ಬಂಧಿತ ಆರೋಪಿಗಳು.

ಅನುಮಾನಸ್ಪದ ರೀತಿಯಲ್ಲಿ ಜವರಪ್ಪ ಶವ ಪತ್ತೆಯಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಸತ್ಯ ಬಯಲಾಗಿದೆ. ಆರೋಪಿ ಸಿದ್ದೇಶ್, ಮೃತನ ಪತ್ನಿ ಅಮೃತಾ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಗಂಡ ಇದ್ದರೆ ತಮ್ಮ ಸಂಬಂಧಕ್ಕೆ ಅಡ್ಡಿ ಆಗುತ್ತೆ ಅಂತ ಕೊಲೆಗೆ ಪ್ಲ್ಯಾನ್‌ ಮಾಡಿದ್ದರು.

ಕುರ್ಣೇಗಾಲ ಗ್ರಾಮದ ಜವರಪ್ಪ ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮದ ಅಮೃತಾಳನ್ನ ವಿವಾಹವಾಗಿದ್ದ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಸಣ್ಣಪುಟ್ಟ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಗಲಾಟೆ ಆಗುತ್ತಿತ್ತು.

12 ದಿನಗಳ ಹಿಂದೆ ಮಕ್ಕಳೊಂದಿಗೆ ಹಬ್ಬಕ್ಕೆಂದು ಅಮೃತ ತವರಿಗೆ ಹೋಗಿದ್ದಳು. ಏ.16 ರಂದು ಹೆಂಡತಿ ಮನೆಗೆ ಹೋಗಿ ಬರುತ್ತೇನೆಂದು ಜವರಪ್ಪ ಹೋಗಿದ್ದ. ಅಲ್ಲಿಯೆ ಈ ಕೊಲೆ ನಡೆದಿದೆ. ಕೊಲೆ ಮಾಡಿ ಗ್ರಾಮದ ಸಮೀಪದ ರಸ್ತೆ ಬದಿಯಲ್ಲಿ ಮೃತದೇಹ ಬಿಸಾಕಿದ್ದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ