ಬುದ್ಧಿವಾದ ಹೇಳಿದ ಪತ್ನಿಯನ್ನೇ ಕೊಂದ ಪತಿ

Spread the love

ಚಿಕ್ಕೋಡಿ(ಬೆಳಗಾವಿ): ಜಗಳವಾಡುತ್ತಿದ್ದ ಪತಿಗೆ ಜಗಳವಾಡಬೇಡ ಎಂದು ಬುದ್ಧಿವಾದ ಹೇಳಿದಕ್ಕೆ ತಲೆ ಕೆಟ್ಟ ಪತಿ ತನ್ನ ಹೆಂಡತಿಯನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಹುಲಗಬಾಳ ಗ್ರಾಮದ ನಿವಾಸಿ ಲಕ್ಷ್ಮೀಬಾಯಿ ಸಿದ್ದರಾಯ ಮೊಳೆ(48) ಕೊಲೆಯಾದ ದುರ್ದೈವಿ, ಸಿದ್ದರಾಯ ಮೊಳೆ(54) ಪತ್ನಿಯನ್ನು ಕೊಲೆ ಮಾಡಿದ ಪಾಪಿ.

ಪತಿ ಸಿದ್ದರಾಯ ಸದಾ ಅವರಿವರೊಂದಿಗೆ ಜಗಳವಾಡಿಕೊಳ್ಳುತ್ತಿದ್ದ, ಇದನ್ನು ಕಂಡ ಲಕ್ಷ್ಮೀಬಾಯಿ ಜಗಳವಾಡಬೇಡ ಎಂದು ಬುದ್ಧಿವಾದ ಹೇಳುತ್ತಿದ್ದಳು. ನನಗೇ ಬುದ್ಧಿವಾದ ಹೇಳುತ್ತಿಯಾ ಎಂದು ಕೊಡಲಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ದುರುಳ. ಸ್ಥಳಕ್ಕೆ ಅಥಣಿ ಪೊಲೀಸರು ದೌಡಾಯಿಸಿ ಪಾಪಿ ಪತಿಯನ್ನು ವಶಕ್ಕೆ ಪಡೆದಿದ್ದಾರೆ. ಕೊಲೆಗೆ ಅನೈತಿಕ ಸಂಬಂಧವೂ ಕಾರಣವಿರಬಹುದು ಎಂದು ಪೊಲೀಸರು ಮಾಹಿತಿ ಪಡೆದಿದ್ದಾರೆ, ತನಿಖೆ ಮುಂದುವರಿಸಿದ್ದಾರೆ.

ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಯಲ್ಲಮ್ಮನಗುಡ್ಡದಲ್ಲಿ ಸಂಚಾರ ಕಿರಿಕಿರಿ

Spread the loveಸವದತ್ತಿ: ಸಮೀಪದ ಯಲ್ಲಮ್ಮನಗುಡ್ಡದ ಶ್ರೀ ರೇಣುಕಾ ಯಲ್ಲಮ್ಮದೇವಿ ಜಾತ್ರೆ ಅಂಗವಾಗಿ ಅಪಾರ ಭಕ್ತ ಸಮೂಹ ಆಗಮಿಸಿದ್ದರಿಂದ ಮಂಗಳವಾರ ಎಲ್ಲೆಡೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ