ಬೋರಗಾಂವ ಪಟ್ಟಣದಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಂದ ವಿಶೇಷ ವಾರ್ಷಿಕ ಶಿಬಿರದ ಮೂರನೇ ದಿನದ “ಮಹಿಳಾ ಸಬಲೀಕರಣ” ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಶ್ರೀ ಬಸವಪ್ರಸಾದ ಹಾಗೂ ಯಶಸ್ವಿನಿ ಜೊಲ್ಲೆ ಯವರು ಉದ್ಘಾಟಿಸಿ ಚಾಲನೆ ನೀಡಿದರು.ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರೆದವರನ್ನು ಮನರಂಜಿಸಿದರು.
ಮಹಿಳೆಯರ ಸಬಲೀಕರಣ ಹಾಗೂ ಆರ್ಥಿಕವಾಗಿ ಸ್ವಾವಲಂಬಿಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಮಹಿಳಾ ಪರ ಯೋಜನೆಗಳನ್ನು ರೂಪಿಸಿದ್ದು, ಅವುಗಳ ಪ್ರಯೋಜನ ಪಡೆದು ದೇಶದ ಆರ್ಥಿಕ ಪ್ರಗತಿಗೆ ಪ್ರತಿ ಮಹಿಳೆಯರು ಕೈಜೋಡಿಸಬೇಕು.
ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಸದಸ್ಯರು ಸ್ಥಳೀಯ ಮುಖಂಡರು,ಪಟ್ಟಣದ ಮಹಿಳೆಯರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Laxmi News 24×7