ಉಗರಗೋಳ: ‘ರೇಣುಕಾ ಯಲ್ಲಮ್ಮನ ಕ್ಷೇತ್ರ ಬಂಡೆಗಲ್ಲುಗಳಿಂದ ಕೂಡಿರುವ ಪ್ರದೇಶ. ಇಲ್ಲಿ ಸಸಿ ನೆಟ್ಟು ಪೋಷಿಸುವುದು ಸವಾಲಿನ ಕೆಲಸ. ಹೀಗಾಗಿ ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆ ಮಾಡುವ ಮೂಲಕ ಆರೋಗ್ಯಕರ ಸಮಾಜ ನಿರ್ಮಿಸಲು ಶ್ರಮಿಸಬೇಕು’ ಎಂದು ಯಲ್ಲಮ್ಮ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ಉಪಾಧ್ಯಕ್ಷ, ಶಾಸಕ ವಿಶ್ವಾಸ್ ವೈದ್ಯ ಹೇಳಿದರು.
ಯಲ್ಲಮ್ಮನ ಗುಡ್ಡದಲ್ಲಿ ಶನಿವಾರ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ, ಭದ್ರತಾ ಕೊಠಡಿಯ ಉದ್ಘಾಟನೆ, ಯಲ್ಲಮ್ಮನ ಗುಡ್ಡದ ಸೌಂದರ್ಯೀಕರಣ, ನೆರಳಿನ ದೃಷ್ಟಿಯಿಂದ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು.
ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಶಿದ್ದನಗೌಡ ಗೂಡರಾಶಿ ಮಾತನಾಡಿದರು. ಅಭಿವೃದ್ದಿ ಕಾರ್ಯದರ್ಶಿ ಪ್ರಭವತಿ ಫಕೀರಪೂರ, ಮಲ್ಲು ಜಕಾತಿ, ಶಿವಾನಂದ ಪಟ್ಟಣಶೆಟ್ಟಿ, ನಾಗರತ್ನಾ ಚೋಳಿನ, ಮಂಜುನಾಥ ಅಂಗಡಿ, ಅಲ್ಲಮಪ್ರಭು ಪ್ರಭುನವರ, ಆರ್.ಎಚ್. ಸವದತ್ತಿ, ಸಿ.ಎನ್. ಕುಲಕರ್ಣಿ, ನಾಗರಾಜ ಬಡೆಪ್ಪನವರ, ಶ್ರೀಧರ ಇನಗಂಟಿ ಇದ್ದರು.
Laxmi News 24×7