Breaking News
Home / Uncategorized / ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ : ಪಾಲಿಕೆ ಸದಸ್ಯರಿಗೆ ಸಿಎಂ ಬೊಮ್ಮಾಯಿ ಸನ್ಮಾನ

ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ : ಪಾಲಿಕೆ ಸದಸ್ಯರಿಗೆ ಸಿಎಂ ಬೊಮ್ಮಾಯಿ ಸನ್ಮಾನ

Spread the love

ಬೆಂಗಳೂರು : ಇತ್ತೀಚೆಗೆ ನಡೆದ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಸದಸ್ಯರಿಗೆ ಸಿಎಂ ಬೊಮ್ಮಾಯಿ ಅಭಿನಂದಿಸಿ ಸನ್ಮಾನ ಮಾಡಿದ್ದಾರೆ.

 

ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯ 35 ವಾರ್ಡ್ ಗಳ ಪೈಕಿ 17 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದರು.

ಈ ಹಿನ್ನೆಲೆ 17 ನೂತನ ಪಾಲಿಕೆ ಸದಸ್ಯರು ಹಾಗೂ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಇಂದು ಬೆಂಗಳೂರಿನಲ್ಲಿ ಅಭಿನಂದನೆ ಸಲ್ಲಿಸಿ ಸನ್ಮಾನಿಸಲಾಯಿತು. ಈ ಕುರಿತು ಬಿಜೆಪಿ ಟ್ವೀಟ್ ನಲ್ಲಿ ಸಂತಸ ಹಂಚಿಕೊಂಡಿದೆ.

 

ಈ ಫಲಿತಾಂಶ ಮುಂಬರುವ ಚುನಾವಣೆಯಲ್ಲಿ, ಕರ್ನಾಟಕದೆಲ್ಲೆಡೆ ಕಮಲ ಅರಳುವ ಮುನ್ಸೂಚನೆಯಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳು. ಪಕ್ಷದ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಶಾಸಕ ಡಾ. ಎನ್. ಮಹೇಶ್ & ದೇವದುರ್ಲಭ ಕಾರ್ಯಕರ್ತರಿಗೆ ಮನಃಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಬೊಮ್ಮಾಯಿ ಹೇಳಿದ್ದಾರೆ.


Spread the love

About Laxminews 24x7

Check Also

ಕಾಂಗ್ರೆಸ್ ಶಾಸಕರದ್ದು ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ ;

Spread the loveಬೆಂಗಳೂರು : ರಾಜ್ಯದ ಪ್ರಸ್ತುತ ಕಾಂಗ್ರೆಸ್ ಶಾಸಕರದ್ದು ಎನ್ನಲಾದ ಅಶ್ಲೀಲ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ