Breaking News

ಮಳೆಗೆ ಇನ್ನೂ ಸಿದ್ಧವಾಗದ ನಗರಸಭೆ, ಗ್ರಾಮ ಪಂಚಾಯ್ತಿಗಳು…………

Spread the love

ಯಾದಗಿರಿ: ಜಿಲ್ಲೆಯಲ್ಲಿ ಒಂದು ಗಂಟೆಗೂ ಅಧಿಕ ಹೊತ್ತು ಮಳೆ ಬಂದಿದ್ದು, ಹಳ್ಳಿ ಮತ್ತು ನಗರಗಳಲ್ಲಿ ಮಳೆ ಅವಾಂತರ ಸೃಷ್ಟಿ ಮಾಡಿದೆ. ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದ್ದು, ಚರಂಡಿಗಳು ತುಂಬಿ ಹರಿದಿವೆ.

 

ಪರಿಣಾಮ ರಸ್ತೆ ತುಂಬೆಲ್ಲಾ ಕೊಳಚೆನೀರು ನಿಂತು, ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಯಾದಗಿರಿ ನಗರದ ಗಾಂಧಿ ವೃತ್ತ, ನಗರ ಪೋಲಿಸ್ ಠಾಣೆಯ ಮುಂದೆ ನೀರು ನಿಂತು ಕೆರೆಯಂತಾಗಿದೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆಗಾಲ ಆರಂಭವಾಗಿದ್ದರೂ ನಗರಸಭೆ ಮಾತ್ರ ಇನ್ನೂ ನಿದ್ದೆಯಿಂದ ಎದ್ದಿಲ್ಲ ಅಂತ, ಸ್ಥಳೀಯರು ನಗರಸಭೆಗೆ ಹಿಡಿ ಶಾಪ ಹಾಕುತ್ತಿದ್ದಾರೆ.

ತಾಲೂಕಿನ ಬಂದಳ್ಳಿಯಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮದ ಮುಖ್ಯ ರಸ್ತೆಯ ಚರಂಡಿ ಮೇಲೆ ಸಾರ್ವಜನಿಕ ಶೌಚಾಲಯ ಕಟ್ಟಿದ ಪರಿಣಾಮ, ಶೌಚಾಲಯ ಕೊಳಚೆನೀರು ರಸ್ತೆಗೆ ಹರಿಯುತ್ತಿವೆ. ತಗ್ಗು ಪ್ರದೇಶಗಳಲ್ಲಿನ ಮನೆಗಳ ಮುಂದೆ ಈ ನೀರು ಸಂಗ್ರಹವಾಗಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಉಂಟಾಗಿದ್ದರೂ ಗ್ರಾಮ ಪಂಚಾಯತಿ ಅಧಿಕಾರಗಳ ಮಾತ್ರ ಕ್ಯಾರೆ ಎನ್ನುತ್ತಿಲ್ಲ.


Spread the love

About Laxminews 24x7

Check Also

ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬಾಲಕಿ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರ

Spread the loveಯಾದಗಿರಿ: ಮಹಲ್ ರೋಜಾದ‌ ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್​ಗೆ ಸಂಬಂಧಿಸಿದಂತೆ ಕೇಸ್ ಕೈ ಬಿಡುವಂತೆ ಆಗ್ರಹಿಸಿ ಭಕ್ತರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ