ಕಲಬುರಗಿ: ಕಬ್ಬು ನಾಟಿ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವ ರೈತ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಶಾದಿಪುರ ತಾಂಡಾದಲ್ಲಿ ನಡೆದಿದೆ.
ಮಹೇಶ್ ಚೌವ್ಹಾಣ್ (24) ಸಿಡಿಲಿಗೆ ಬಲಿಯಾದ ರೈತ. ಕಲಬುರಗಿ ಜಿಲ್ಲೆಯ ವಿವಿಧೆಡೆ ಇಂದು ಬಿರುಗಾಳಿ, ಗುಡುಗು ಸಹಿತ ಮಳೆಯಾಗಿದೆ. ಈ ವೇಳೆ ಜಮೀನಿನಲ್ಲಿ ಕಬ್ಬು ನಾಟಿ ಮಾಡಲೆಂದು ಹೋಗಿದ್ದ ಮಹೇಶ್ ಸಿಡಿಲಿಗೆ ಬಲಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಂಚಾವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Laxmi News 24×7