ವಿಜಯಪುರ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (Yediyurappa) ಬಗ್ಗೆ ಮಾತನಾಡಬೇಡಿ ಎಂದಿದ್ದಾರೆ. ನಮ್ಮ ಹೈಕಮಾಂಡ್ ಹೇಳಿದ ತಕ್ಷಣ ನಾನು ಸಾಫ್ಟ್ ಆಗಲೇಬೇಕಲ್ಲ. ಇನ್ಮುಂದೆ ಯಡಿಯೂರಪ್ಪ ಬಗ್ಗೆ ನನಗೆ ಪ್ರಶ್ನೆ ಕೇಳಬೇಡಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮನವಿ ಮಾಡಿದರು. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಯತ್ನಾಳ್ ಸೈಲೆಂಟ್ ಆಗಿದ್ದಾರೆ. ಯಡಿಯೂರಪ್ಪ ಬಗ್ಗೆ ನನಗೆ ಗೌರವವಿದೆ, ಅವರ ಬಗ್ಗೆ ಮಾತನಾಡಲ್ಲ. ಯಡಿಯೂರಪ್ಪ ಹಿರಿಯರಿದ್ದಾರೆ ಬೈಯ್ಯೋದು ಬೇಡ ಅಂದಿದ್ದಾರೆ. ಇನ್ಮುಂದೆ ಬಿಎಸ್ವೈ ಬಗ್ಗೆ ಮಾತಾಡಬೇಡಿ ಎಂದು ಸೂಚಿಸಿದ್ದಾರೆ. ಕೇಂದ್ರದ ಬಿಜೆಪಿ ನಾಯಕರ ಸೂಚನೆಯಂತೆ ಮಾತನಾಡುವುದಿಲ್ಲ. ಮಾಜಿ ಸಿಎಂ ಯಡಿಯೂರಪ್ಪ ನಮ್ಮ ಆಸ್ತಿ ಕಸಿದುಕೊಂಡಿಲ್ಲ. ಅವರ ಬಗ್ಗೆ ನನಗೆ ಅಪಾರ ಗೌರವವಿದೆ ಎಂದು ಯತ್ನಾಳ್ ಹೇಳಿದರು.
Home / new delhi / ಬಿಜೆಪಿ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಸೈಲೆಂಟ್ ಆದ ಶಾಸಕ ಯತ್ನಾಳ್: ಯಡಿಯೂರಪ್ಪ ಬಗ್ಗೆ ಮಾತನಾಡದಂತೆ ಸೂಚನೆ
Check Also
ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ
Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …